20.04.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹಾಗೂ ಒತ್ತಡ ಹೆಚ್ಚಿದ್ದರೆ ಕಾಸರಗೋಡು ಜಿಲ್ಲೆಯಲ್ಲೂ ಮತ್ತು ದ. ಕ. ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಮೋಡದ ವಾತಾವರಣ ಉಂಟಾಗಿದ್ದು, ಸಂಜೆ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಈಗಾಗಲೇ ಮೋಡದ ವಾತಾವರಣ ಇದ್ದು, ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿದೆ. ಈಗಿನಂತೆ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗಿನ ಬಹುತೇಕ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡ ವಾತಾವರಣ ಇದ್ದು, ಗದಗ, ಬಳ್ಳಾರಿ, ದಾವಣಗೆರೆ ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ. ದಕ್ಷಿಣ ಒಳನಾಡಿನ ಮೈಸೂರು, ಬೆಂಗಳೂರು ಹಗೂ ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಈಗಿನಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…
ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…
ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…
ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…
ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…