Advertisement
ವೆದರ್ ಮಿರರ್

ಹವಾಮಾನ ವರದಿ | 18-11-2025 | ಇನ್ನೊಂದು ಮಳೆಯಾಗುವುದು ಪಕ್ಕಾ….!, ಯಾವಾಗ..? ಕಾರಣ ಏನು..?

Share

19.11.2025.ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಕಡಿಮೆ ಇದ್ದು, ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ ಅಥವಾ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಹಾಗೂ ಉಡುಪಿ ಕಾರ್ಕಳ ಸುತ್ತಮುತ್ತ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 19 ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 22ರಿಂದ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನಂತೆ ನವೆಂಬರ್ 22 ರಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಗಳಿವೆ. ಆದರೆ ಕೊಡಗು ಜಿಲ್ಲೆಯಲ್ಲಿ ನವೆಂಬರ್ 19ರಿಂದ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ನವೆಂಬರ್ 22 ರಿಂದ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, 23ರಿಂದ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ. ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಅನಿರೀಕ್ಷಿತ ತುಂತುರು ಮಳೆಯ ಸಾಧ್ಯತೆಯೂ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಹಾಗೂ ಮಳೆಯ ವಾತಾವರಣವು ನವೆಂಬರ್ 25 ರ ತನಕವೂ ಮುಂದುವರಿಯುವ ಸಾಧ್ಯತೆಗಳಿವೆ.

ನವೆಂಬರ್ 21ರಂದು ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಕಾರಣದಿಂದ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳಿಲ್ಲ. ಆದರೆ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಸುಮಾರು ನವೆಂಬರ್ 25, 26ರಂದು ತಮಿಳುನಾಡು ಅಥವಾ ಆಂದ್ರಾ ಕರಾವಳಿ ಮೂಲಕ ಪ್ರವೇಶಿಸುವ ಲಕ್ಷಣಗಳಿರುವುದರಿಂದ ರಾಜ್ಯದಲ್ಲೂ ನವೆಂಬರ್ 26ರ ನಂತರ ಮಳೆಯಾಗುವ ಸಾಧ್ಯತೆಗಳಿವೆ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

5 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

6 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

6 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

14 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

14 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago