ಹವಾಮಾನ ವರದಿ | 23-10-2025 | ರಾಜ್ಯದಲ್ಲಿ ಅ.28 ರವರೆಗೂ ಮಳೆ ಯಾಕೆ..?

October 23, 2025
11:46 AM

24.10.25ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮಳೆ ಹೆಚ್ಚಿರುವ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಾಧ್ಯತೆಯೂ ಇದೆ.

Advertisement

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಗುಡುಗು ಸಾಧ್ಯತೆಯೂ ಇದೆ.

Advertisement

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ವಿಜಯಪುರ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಪ್ಪಳ, ರಾಯಚೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು : ಮೈಸೂರು, ಚಾಮರಾಜನಗರ (ಗುಂಡ್ಲುಪೇಟೆ ಸುತ್ತಮುತ್ತ) ಜಿಲ್ಲೆಯಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಚಾಮರಾಜನಗರದ ಕೊಳ್ಳೇಗಾಲ ಸುತ್ತಮುತ್ತ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.

Advertisement

ಬಂಗಾಳಕೊಲ್ಲಿಯ ತಿರುಗುವಿಕೆಯು ಅಕ್ಟೊಬರ್ 24 ರಂದು ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿವೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರಕ್ಕೆ ಚಲಿಸುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಅಕ್ಟೊಬರ್ 28 ರ ತನಕವೂ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror