ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಚಿತ್ರದುರ್ಗ ಜಿಲ್ಲೆಯ ಪರಶುರಾಮ್ಪುರದಲ್ಲಿ ಅತೀ ಹೆಚ್ಚು 12 ಸೆಂಟಿ ಮೀಟರ್ ಮಳೆಯಾಗಿದೆ. ಕುಂದಾಪುರ ಮತ್ತು ಯಾದಗಿರಿ ಜಿಲ್ಲೆಯ ಕಕ್ಕೇರಿಯಲ್ಲಿ ತಲಾ 8 ಸೆಂಟಿ ಮೀಟರ್ ಮಳೆಯಾಗಿದೆ. ಇದೇ ವೇಳೆ ಸುತಗಟ್ಟಿ ಮಟ್ಟಿಕೊಪ್ಪ 6, ಸಿಂಧನೂರು, ಧಾರವಾಡ ಮತ್ತು ಬಳಗಾನೂರಿನಲ್ಲಿ ತಲಾ 5 ಸೆಂಟಿ ಮೀಟರ್ ಮಳೆಯಾಗಿದೆ.
ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಸಂಭವವಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…