Advertisement
ವೆದರ್ ಮಿರರ್

ಕೃಷಿಕರೇ ಸಂಗ್ರಹಿಸುವ ಮಳೆ ಮಾಹಿತಿ – ರೂರಲ್‌ ಮಿರರ್‌ ನಲ್ಲಿ…

Share
ಗ ಸುಳ್ಯ ತಾಲೂಕಿನ 16 ಮಂದಿ ಕೃಷಿಕರು ತಮ್ಮ ಜಮೀನಿನಲ್ಲಿ ಸುರಿದ ಮಳೆಯನ್ನು ಅಳತೆ ಮಾಡಿ ದಾಖಲಿಸುವ ಹವ್ಯಾಸವನ್ನು ರೂಢಿಸಿಕೊಂಡಿದ್ದಾರೆ.
ಪ್ರತಿ ದಿನ ಬೆಳಗ್ಗೆ ಹಿಂದಿನ 24  ಗಂಟೆಗಳಲ್ಲಿ ಸುರಿದ ಮಳೆಯನ್ನು ಆಸಕ್ತರ “ಮಳೆ ಮಾಹಿತಿ” ವಾಟ್ಸ್ ಅಪ್ ಬಳಗದಲ್ಲಿ ಹಂಚಿಕೊಳ್ಳುತ್ತಾರೆ. ಪ್ರತಿ 13/14 ದಿನಗಳಿಗೊಮ್ಮೆ ಮಹಾ/ಮಳೆ ನಕ್ಷತ್ರ ಬದಲಾದಂತೆ  ತಮ್ಮ “ಮಳೆ ಮಾಹಿತಿ” ಬಳಗದ ತಲೆ ಬರಹಕ್ಕೆ ಆ ನಕ್ಷತ್ರದ ಹೆಸರು ಸೇರ್ಪಡೆಯಾಗುವುದು ಇಲ್ಲಿ ಇನ್ನೊಂದು ವಿಶೇಷ. ಇದರೊಂದಿಗೆ ಪ್ರತಿ ಮಹಾ/ಮಳೆ ನಕ್ಷತ್ರದ ಅವಧಿಯಲ್ಲಿ ದಾಖಲಾದ ಮಳೆಯನ್ನು ವಿಶೇಷವಾಗಿ ಗಮನಿಸುತ್ತಾರೆ,ಮಾತ್ರವಲ್ಲ ಅದು ಕೃಷಿ  ಚಟುವಟಿಕೆಗಳ ಮೇಲೆ ಬೀರಬಹುದಾದ ಪರಿಣಾಮಗಳ ಬಗ್ಗೆ ವಿಶ್ಲೇಷಣೆ ಮಾಡುತ್ತಾರೆ.

ಸುಳ್ಯ ತಾಲೂಕಿನ ಬಾಳಿಲದ ಪಿ.ಜಿ.ಎಸ್.ಎನ್ ಪ್ರಸಾದ್, ಅಯ್ಯನಕಟ್ಟೆಯ ಪಿ.ಜಿ.ಕೃಷ್ಣಮೂರ್ತಿ, ಚೊಕ್ಕಾಡಿಯ ಪಿ.ಕೆ.ಸುಬ್ಬರಾವ್, ಕಲ್ಮಡ್ಕದ ಸುರೇಶ್ಚಂದ್ರ ಟಿ ಆರ್, ಕಮಿಲದ ಮಹೇಶ್ ಪುಚ್ಚಪ್ಪಾಡಿ, ಹಾಲೆಮಜಲಿನ ಉಣ್ಣಿಕೃಷ್ಣನ್, ಮೆಟ್ಟಿನಡ್ಕದ ರಾಜೇಶ್, ಕಲ್ಲಾಜೆಯ ಸೀಜೋ ಅಬ್ರಹಾಂ, ಹರಿಹರದ ವಿನೂಪ್ ಮಲ್ಲಾರ, ಕೊಲ್ಲಮೊಗ್ರದ ಕೇಶವ ಭಟ್ ಕಟ್ಟ, ಮಡಪ್ಪಾಡಿಯ ವಿಜಯ ಕುಮಾರ್ ಎಂ.ಡಿ.,ವಾಲ್ತಾಜೆ-ಕಂದ್ರಪ್ಪಾಡಿಯ  ಪ್ರಶಾಂತ್ ಮುಂಡೋಡಿ, ಸುಳ್ಯ ನಗರದ ಶ್ರೀಧರ  ರಾವ್, ಮುಳ್ಯ-ಅಜ್ಜಾವರದ ವಿಕ್ರಮ್ ಎಂ.ಕೆ, ತೊಡಿಕಾನದ ವಸಂತ ರಾವ್, ದೊಡ್ಡತೋಟದ ವೇದಮೂರ್ತಿ ಕೀಲಾರ್ಕಜೆ,

ಕಡಬ ತಾಲೂಕಿನ ಎಣ್ಮೂರಿನ ಪ್ರಸನ್ನ ಕೆ/ಶ್ರೀ ನಂದನ , ಬಳ್ಪದ ಉದಯ ಕುಮಾರ್, ಸುಬ್ರಹ್ಮಣ್ಯದ ವೆಂಕಟೇಶ್ ಕೆ ಆರ್, ಕೋಡಿಂಬಳ-ತೆಕ್ಕಡ್ಕದ ಪ್ರಶಾಂತ ನರಸಿಂಹ, ಕಡಬದ ಸದಾಶಿವ ರಾವ್,

ಪುತ್ತೂರು ತಾಲೂಕು ಶಾಂತಿಗೋಡಿನ ರಾಮಕೃಷ್ಣ ಭಟ್, ಮುಂಡೂರಿನ ಮುರಳಿ ಬಂಗಾರಡ್ಕ,  ಆರ್ಯಾಪುವಿನ ರಾಮಕೃಷ್ಣ ಬಂಗಾರಡ್ಕ, ಪುತ್ತೂರು  ಬಲ್ನಾಡಿನ ಸುರೇಶ್, ಕೊಳ್ತಿಗೆಯ ಎಕ್ಕಡ್ಕ ಗಣಪತಿ ಭಟ್, ಕೆದಿಲದ ಶಿವಕುಮಾರ್ ಎದುರ್ಕಳ,
ಬಂಟ್ವಾಳ ತಾಲೂಕಿನ ಕೆಲಿಂಜದ ವೆಂಕಟಗಿರಿ, ಮಂಚಿಯ ವಸಂತ ಕಜೆ, ಮುಡಿಪು-ಕೈರಂಗಳದ ಪ್ರವೀಣಶಂಕರ ಕೊಲ್ಲರಮಜಲು,
ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲಿನ ಡಾ.ಕಿಶನ್ ದಿನಕರ್, ಇಳಂತಿಲದ ಕೈಲಾರು ಸುಬ್ರಹ್ಮಣ್ಯ ಭಟ್,
ಕಾಸರಗೋಡಿನ ಕಲ್ಲಕಟ್ಟದ ಪಿ.ಕೆ.ಬಾಲಸುಬ್ರಹ್ಮಣ್ಯ, ಮಡಿಕೇರಿಯ ಎಂ ಚೆಂಬುವಿನ ಆನಂದ ಎಂ. ಇವರು ಮಳೆ ಅಳತೆಯನ್ನು ದಾಖಲಿಸುತ್ತಿರುವವರು.
ಅನೇಕ ಮಂದಿ ಇತ್ತೀಚಿನ ದಿನಗಳಲ್ಲಿ ಈ ಹವ್ಯಾಸವನ್ನು ರೂಢಿಸಿಕೊಂಡವರು. ಇವರೆಲ್ಲರ ಮಳೆ ಅಳತೆ ಮಾಹಿತಿಯನ್ನು ಇನ್ನು ಮುಂದೆ ನಲ್ಲಿ ಬಾಳಿಲದ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರ ಸಾರಥ್ಯದಲ್ಲಿ , ಅವರ ವಿಶ್ಲೇಷಣೆಯೊಂದಿಗೆ ತಾವು ದಿನವೂ ಗಮನಿಸಬಹುದು. ಕರಿಕಳದ ಸಾಯಿಶೇಖರ ಅವರು ಮಳೆ ಮುನ್ಸೂಚನೆಯನ್ನು ನಿಖರವಾಗಿ ಅಭ್ಯಸಿಸಿ ಈ ಬಳಗದಲ್ಲಿ ಹಂಚಿಕೊಳ್ಳುತ್ತಿರುವುದು ಈ ಬಳಗದ ಇನ್ನೊಂದು ಗರಿಮೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

16 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

16 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

16 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

16 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

17 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

1 day ago