ಹವಾಮಾನ ವರದಿ | 14-10-2025 | ಮಳೆ ಮತ್ತಷ್ಟು ಚುರುಕಾಗುವ ಲಕ್ಷಣ ಇದೆ, ಕಾರಣವೇನು..?

October 14, 2025
2:04 PM
ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ, ತಮಿಳುನಾಡು ಮೂಲಕ ಗಾಳಿಯ ಪ್ರವೇಶದ ಜೊತೆಗೆ ಹಿಂಗಾರು ಮಾರುತಗಳು ಸೇರಿಕೊಂಡು ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಸುಮಾರು ಅಕ್ಟೊಬರ್ 18,19ರ ಸಮಯದಲ್ಲಿ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರಿಂದ ಹಿಂಗಾರು ಮತ್ತಷ್ಟು ಚುರುಕಾಗುವ ಲಕ್ಷಣಗಳಿವೆ. ಬದಲಾವಣೆಯನ್ನು ಕಾದು ನೋಡಬೇಕಾಗಿದೆ.

15.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮೋಡ ಮತ್ತು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಒಂದಿಲ್ಲೊಂದು ಕಡೆ ಗುಡುಗು ಸಹಿತ ಹಿಂಗಾರು ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೂ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು. ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಮಧ್ಯ ಒಂದೆರಡು ದಿನಗಳಲ್ಲಿ ಪ್ರಮಾಣ ಸ್ವಲ್ಪ ಕಡಿಮೆ ಇರಬಹುದು.

ಒಳನಾಡು : ಉತ್ತರ ಒಳನಾಡಿನ ದಾವಣಗೆರೆ, ವಿಜಯನಗರ, ಬಳ್ಳಾರಿ, ರಾಯಚೂರು, ವಿಜಾಪುರ, ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ, ತಮಿಳುನಾಡು ಮೂಲಕ ಗಾಳಿಯ ಪ್ರವೇಶದ ಜೊತೆಗೆ ಹಿಂಗಾರು ಮಾರುತಗಳು ಸೇರಿಕೊಂಡು ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಸುಮಾರು ಅಕ್ಟೊಬರ್ 18,19ರ ಸಮಯದಲ್ಲಿ ಕೇರಳ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಇದರಿಂದ ಹಿಂಗಾರು ಮತ್ತಷ್ಟು ಚುರುಕಾಗುವ ಲಕ್ಷಣಗಳಿವೆ. ಬದಲಾವಣೆಯನ್ನು ಕಾದು ನೋಡಬೇಕಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ
January 9, 2026
10:26 PM
by: ದ ರೂರಲ್ ಮಿರರ್.ಕಾಂ
ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ
January 9, 2026
10:16 PM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?
January 9, 2026
10:08 PM
by: ದ ರೂರಲ್ ಮಿರರ್.ಕಾಂ
ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ
January 9, 2026
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror