Advertisement
MIRROR FOCUS

#WeatherMirror | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ | ರಾಜ್ಯದಲ್ಲಿ 4 ದಿನಗಳ ಕಾಲ ಮಳೆ ಸಾಧ್ಯತೆ |

Share

ಮುಂಗಾರು ಮಳೆ  ರಾಜ್ಯದಲ್ಲಿ ಈ ಬಾರಿ ಕೈಕೊಟ್ಟಿತು. ರಾಜ್ಯದ 120ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರ ಸಿದ್ಧತೆ ನಡೆಸಿದೆ. ರೈತನ ಪಾಡು ಮೂರಾಬಟ್ಟೆಯಾಗಿದೆ. ಅವನನ್ನು ನಂಬಿ ಬದುಕುವ ಕೋಟಿ ಕೋಟಿ ಜನ ಈ ಬಾರಿ ಪರದಾಡಬೇಕಾಗುವುದು ಖಚಿತ. ಈ ಮಧ್ಯೆ ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆಯಿದೆ.

ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ ಹಾಗೂ ಚಾಮರಾಜನಗರದಲ್ಲೂ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತ ಲೆಕ್ಕದಲ್ಲಾದರು ಒಂದಿನಿತು ಮಮಳೆ ಬಿದ್ದರೆ ನಾಡಿನ ಜನತೆ ಧನ್ಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

3 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

5 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

5 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

7 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

12 hours ago