ಕರ್ನಾಟಕದಲ್ಲಿ ಹಿಂಗಾರು ಮಳೆ ಜೋರಾಗಿದ್ದು ಕಳೆದೊಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲೂ ಮಳೆಯ ಆರ್ಭಟ ಜೋರಾಗಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಕೋಲಾರ, ಮಂಡ್ಯ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ ದಾವಣಗೆರೆ, ಬೆಳಗಾವಿ, ಉತ್ತರ ಕನ್ನಡ, ಉಡುಪಿ ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ 16 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರೀ ಮಳೆಯಾಗುವ ಹಿನ್ನೆಲೆ ರಾಜ್ಯದ 16 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಕಡಿಮೆ ಮಳೆ ಆಗಲಿದ್ದು ಮುಂದಿನ 5 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ನಮ್ಮ ದೇಶದಲ್ಲಿ ಜ್ಞಾನವಂತ ಯುವ ಜನರನ್ನು ಸೃಷ್ಟಿಸುವುದು ದೇಶವನ್ನು ಬಲಿಷ್ಟಗೊಳಿಸುವ ಕಾರ್ಯವಾಗಿದೆ. ಈ…
ಅಕ್ಟೊಬರ್ 24ರಂದು ಸಾಮಾನ್ಯ ಮಳೆಯ ಸಾಧ್ಯತೆ ಇದ್ದು, 25ರಿಂದ ಮಳೆ ಸಂಪೂರ್ಣ ಕಡಿಮೆಯಾಗುವ…
ವಾಣಿಜ್ಯ ಬೆಳೆಯಿಂದ ಹೊರಬಂದು ಸಿರಿಧಾನ್ಯ ಬೆಳೆದು ಧಾನ್ಯ ಸಂಗ್ರಹಿಸಿ, ಸಂಸ್ಕರಿಸಿ, ತಾವೇ ಬ್ರಾಂಡಿಂಗ್…
ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ…
ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ, ರೋಟರಿ ಕ್ಲಬ್ ಪುತ್ತೂರು ಈಸ್ಟ್…
ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ,…