Advertisement
ವೆದರ್ ಮಿರರ್

ಹವಾಮಾನ ವರದಿ | 21-08-2025 | ಆ.25 ರ ನಂತರ ಮತ್ತೆ ಒಂದು ವಾರ ಮಳೆ…!

Share

22.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ದಿನದಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 24ರ ತನಕ ಮೋಡ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ 25 ರಿಂದ 4 ರಿಂದ 5 ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಆಗಸ್ಟ್ 24ರ ತನಕ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಗಳಿದ್ದು, 25 ರಿಂದ 31ರ ತನಕ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

ಒಳನಾಡು : ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯನಗರ, ದಾವಣಗೆರೆ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಕೋಲಾರ ಹಾಗೂ ಬೆಂಗಳೂರು ದಕ್ಷಿಣ ಭಾಗಗಳಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನಲ್ಲಿ ಆಗಸ್ಟ್ 22 ರಿಂದ 25 ರ ತನಕ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 23 ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚೆನೆ ಇದ್ದು, 24ರಿಂದ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.  ಆಗಸ್ಟ್ 26 ರಿಂದ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

ಆಗಸ್ಟ್ 25ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ” WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 08-08-2026 | ಕರಾವಳಿಯಲ್ಲಿ ಮಳೆ ಇಳಿಕೆ – ರಾಜ್ಯದಲ್ಲಿ ಹೇಗೆ..?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದ್ದು,…

7 hours ago

ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಿದೆ… ಆದರೆ ರೈತರಿಗೆ ಲಾಭ ಹೆಚ್ಚಿದೆಯೇ?

ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…

12 hours ago

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ

ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್‌ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…

12 hours ago

ದಕ್ಷಿಣ ಕನ್ನಡದಲ್ಲಿ ಮಳೆ | 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ – ಕಾಸರಗೋಡಿನಲ್ಲೂ ಶಾಲೆಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…

12 hours ago

ಸ್ವಾತಂತ್ರ್ಯ ದಿನಾಚರಣೆ : ಪ್ಲಾಸ್ಟಿಕ್ ಧ್ವಜ ಬಳಸದಂತೆ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…

13 hours ago

ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ

ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…

13 hours ago