ವೆದರ್ ಮಿರರ್

ಹವಾಮಾನ ವರದಿ | 08-04-2025 | ಕೆಲವು ಕಡೆ ಅನಿರೀಕ್ಷಿತ ಮಳೆ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

09.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆಕೆಯೊಂದಿಗೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಮೂಡಬಿದರೆ, ಮಂಗಳೂರು, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಸುತ್ತಮುತ್ತ ಪ್ರದೇಶದಲ್ಲೂ ಅನಿರೀಕ್ಷಿತ ಮಳೆಯ ಸಾಧ್ಯತೆ ಇದೆ.
ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯು ಮುಂದುವರಿಯುವ ಸಾಧ್ಯತೆಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಮುನ್ಸೂಚೆನೆಗಳಿವೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಸ್ವಲ್ಪ ಜಾಸ್ತಿಯೇ ಇರಬಹುದು. ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಕೊಡಗು ಅಲ್ಲಲ್ಲಿ ಹಾಗೂ ಉಳಿದ ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ, ಧಾರವಾಡ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ಎಪ್ರಿಲ್ 10ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಉತ್ತರ ಒಳನಾಡು ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ವಾಯವ್ಯ ಕಡೆ ಚಲಿಸಿ ಮ್ಯಾನ್ಮಾರ್ ಕಡೆ ಸಾಗುವ ನಿರೀಕ್ಷೆ ಇದೆ. ಇದರ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುವ ಗಾಳಿಯು ದುರ್ಬಲಗೊಂಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

3 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

21 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago