ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

April 11, 2025
12:06 PM
ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿದೆ.

12.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಈಗಾಗಲೇ ಮುಂಜಾನೆ ಉತ್ತಮ ಮಳೆಯಾಗಿದೆ. ಆದರೂ ಸಂಜೆ ಅಥವಾ ರಾತ್ರಿ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪ್ರಭಾವ ಪ್ರಮುಖವಾಗಿದೆ. ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಘಟ್ಟ ಪ್ರದೇಶದ ಮೋಡಗಳು ಪೂರ್ವಕ್ಕೆ ಅಂದರೆ ಬಂಗಾಳಕೊಲ್ಲಿಯ ಕಡೆ ಚಲಿಸುವ ಸಾಧ್ಯತೆಗಳಿವೆ. ಹೀಗೆ ಸಂಭವಿಸಿದರೆ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.
ಈಗನಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿದೆ.

Advertisement

ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 12ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಪೂರ್ವಕ್ಕೆ ಚಲಿಸುವ ಮೋಡಗಳಿಂದ ಬಳ್ಳಾರಿ ತನಕವೂ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ದಿನ ಬಿಟ್ಟು ದಿನ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror