ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

April 11, 2025
12:06 PM
ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿದೆ.

12.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಈಗಾಗಲೇ ಮುಂಜಾನೆ ಉತ್ತಮ ಮಳೆಯಾಗಿದೆ. ಆದರೂ ಸಂಜೆ ಅಥವಾ ರಾತ್ರಿ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಆದರೆ ಗಾಳಿಯ ಪ್ರಭಾವ ಪ್ರಮುಖವಾಗಿದೆ. ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಭಾವ ಹೆಚ್ಚಿರುವುದರಿಂದ ಘಟ್ಟ ಪ್ರದೇಶದ ಮೋಡಗಳು ಪೂರ್ವಕ್ಕೆ ಅಂದರೆ ಬಂಗಾಳಕೊಲ್ಲಿಯ ಕಡೆ ಚಲಿಸುವ ಸಾಧ್ಯತೆಗಳಿವೆ. ಹೀಗೆ ಸಂಭವಿಸಿದರೆ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.
ಈಗನಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಮಳೆಯ ಸಾಧ್ಯತೆ ಕಾಣಿಸುತ್ತಿದೆ.

ಮಲೆನಾಡು : ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 12ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಪೂರ್ವಕ್ಕೆ ಚಲಿಸುವ ಮೋಡಗಳಿಂದ ಬಳ್ಳಾರಿ ತನಕವೂ ಮಳೆಯ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು( ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಈಗಿನಂತೆ ದಿನ ಬಿಟ್ಟು ದಿನ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಗಳಿವೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror