ಹವಾಮಾನ ವರದಿ | 21-03-2025 | ಮಾ.25 ರಿಂದ ವಿವಿದೆಡೆ ಮಳೆ ನಿರೀಕ್ಷೆ | ಇಂದು ಕೆಲವು ಕಡೆ ಮಳೆ ಸಾಧ್ಯತೆ |

March 21, 2025
1:56 PM
ಮಾರ್ಚ್ 25 ರಿಂದ ಕಾಸರಗೋಡು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಮಾರ್ಚ್ 22ರಿಂದ ಉತ್ತರ ಒಳನಾಡಿನ ಅಲ್ಲಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

22.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಸೆಕೆ ಮುಂದುವರಿಯಲಿದೆ.  ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಗಾಳಿಯ ಪ್ರಭಲವಾಗಿದ್ದರೆ ಕರಾವಳಿಯ ಕೆಲವು ಭಾಗಗಳಲ್ಲಿ ಮುನ್ಸೂಚನೆಗೆ ದೊರಕದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಮಾರ್ಚ್ 25 ರಿಂದ ಕಾಸರಗೋಡು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ನಿನ್ನೆ ಅನಿರೀಕ್ಷಿತ ಮಳೆಯಾಗಿದೆ. ಇವತ್ತು, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 22ರಿಂದ ಉತ್ತರ ಒಳನಾಡಿನ ಅಲ್ಲಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಲಾ ನಿನಾ ಪ್ರಭಾವ ಇರುವುದರಿಂದ ರಾಜ್ಯದಲ್ಲಿ ಮಾರ್ಚ್ ಹಾಗೂ ಎಪ್ರಿಲ್ ತಿಂಗಳಲ್ಲಿ ಉತ್ತಮ ಬೇಸಿಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ. ವರದಿಗಳ ಪ್ರಕಾರ ಈ ಸಲವೂ ಸಮಯಕ್ಕೆ ಸರಿಯಾಗಿ ಉತ್ತಮ ಮುಂಗಾರಿನ ನಿರೀಕ್ಷೆ ಇದೆ.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?
June 4, 2025
6:45 AM
by: ದ ರೂರಲ್ ಮಿರರ್.ಕಾಂ
ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು
June 4, 2025
2:01 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group