ವೆದರ್ ಮಿರರ್

ಹವಾಮಾನ ವರದಿ | 21-03-2025 | ಮಾ.25 ರಿಂದ ವಿವಿದೆಡೆ ಮಳೆ ನಿರೀಕ್ಷೆ | ಇಂದು ಕೆಲವು ಕಡೆ ಮಳೆ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

22.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು ಅಲ್ಲಲ್ಲಿ ಮೋಡದ ವಾತಾವರಣದ ಸೆಕೆ ಮುಂದುವರಿಯಲಿದೆ.  ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಹ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.  ಗಾಳಿಯ ಪ್ರಭಲವಾಗಿದ್ದರೆ ಕರಾವಳಿಯ ಕೆಲವು ಭಾಗಗಳಲ್ಲಿ ಮುನ್ಸೂಚನೆಗೆ ದೊರಕದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ ಮಾರ್ಚ್ 25 ರಿಂದ ಕಾಸರಗೋಡು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನದ ಸಕ್ಲೇಶ್ಪುರ ಸುತ್ತಮುತ್ತ ಭಾಗಗಳಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದು, ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಅಲ್ಲಲ್ಲಿ ನಿನ್ನೆ ಅನಿರೀಕ್ಷಿತ ಮಳೆಯಾಗಿದೆ. ಇವತ್ತು, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಮಾರ್ಚ್ 22ರಿಂದ ಉತ್ತರ ಒಳನಾಡಿನ ಅಲ್ಲಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಲಾ ನಿನಾ ಪ್ರಭಾವ ಇರುವುದರಿಂದ ರಾಜ್ಯದಲ್ಲಿ ಮಾರ್ಚ್ ಹಾಗೂ ಎಪ್ರಿಲ್ ತಿಂಗಳಲ್ಲಿ ಉತ್ತಮ ಬೇಸಿಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ. ವರದಿಗಳ ಪ್ರಕಾರ ಈ ಸಲವೂ ಸಮಯಕ್ಕೆ ಸರಿಯಾಗಿ ಉತ್ತಮ ಮುಂಗಾರಿನ ನಿರೀಕ್ಷೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

8 minutes ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 minutes ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

18 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago