10.11.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳ ಅಲ್ಲಲ್ಲಿ ನಿನ್ನೆ ಸಂಜೆ ಅನಿರೀಕ್ಷಿತ ಉತ್ತಮ ಮಳೆಯಾಗಿದೆ. ಕೆಲವು ಭಾಗಗಳಲ್ಲಿ 100 ಮಿ. ಮೀ. ಗಿಂತಲೂ ಅಧಿಕ ಮಳೆಯಾದ ವರದಿಯಾಗಿದೆ. ಇವತ್ತು ರಾಜ್ಯದಾದ್ಯಂತ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ಸಾಧ್ಯತೆಯೂ ಇದೆ.
ಫಿಲಿಪ್ಪೀನ್ಸ್ ಪಶ್ಚಿಮ ಕರಾವಳಿಯಲ್ಲಿ ಉಂಟಾಗಿದ್ದ ಪ್ರಭಲ ಚಂಡಮಾರುತದ ಪರಿಣಾಮದಿಂದ ನಮ್ಮ ಹಿಂಗಾರು ಮಾರುತಗಳು ಆ ಕಡೆಗೆ ಸೆಳೆಯಲ್ಪಟ್ಟಿದ್ದವು. ಚಂಡಮಾರುತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೆ ಹಿಂಗಾರು ತನ್ನ ಸಾಂಪ್ರದಾಯಿಕ ಹಾದಿಗೆ ಮರಳಿದೆ. ಆದರೆ, ಉತ್ತರ ಭಾರತದ ಕಡೆಯಿಂದ ಶೀತ ಗಾಳಿಯೂ ಬೀಸುತ್ತಿರುವುದರಿಂದ ಪರಿಸ್ಥಿತಿ ಕಾದುನೋಡಬೇಕಾಗಿದೆ. ಈ ಮಧ್ಯೆ ನವೆಂಬರ್ 12 ರಂದು ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈಗಿನಂತೆ ನವೆಂಬರ್ 12ರ ನಂತರ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡಿನ ಕೊಡಗು, ಹಾಸನ ಮತ್ತು ಕರಾವಳಿಯ ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಮಳೆಯ ಮುನ್ಸೂಚನೆಯೂ ಇದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…