10.11.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ದಕ್ಷಿಣ ಕನ್ನಡದ ಜಿಲ್ಲೆಯ ಸುಳ್ಯ ಹಾಗೂ ಕಡಬ ತಾಲೂಕುಗಳ ಅಲ್ಲಲ್ಲಿ ನಿನ್ನೆ ಸಂಜೆ ಅನಿರೀಕ್ಷಿತ ಉತ್ತಮ ಮಳೆಯಾಗಿದೆ. ಕೆಲವು ಭಾಗಗಳಲ್ಲಿ 100 ಮಿ. ಮೀ. ಗಿಂತಲೂ ಅಧಿಕ ಮಳೆಯಾದ ವರದಿಯಾಗಿದೆ. ಇವತ್ತು ರಾಜ್ಯದಾದ್ಯಂತ ಒಣ ಹವೆ ಆವರಿಸುವ ಮುನ್ಸೂಚನೆ ಇದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ಸಾಧ್ಯತೆಯೂ ಇದೆ.
ಫಿಲಿಪ್ಪೀನ್ಸ್ ಪಶ್ಚಿಮ ಕರಾವಳಿಯಲ್ಲಿ ಉಂಟಾಗಿದ್ದ ಪ್ರಭಲ ಚಂಡಮಾರುತದ ಪರಿಣಾಮದಿಂದ ನಮ್ಮ ಹಿಂಗಾರು ಮಾರುತಗಳು ಆ ಕಡೆಗೆ ಸೆಳೆಯಲ್ಪಟ್ಟಿದ್ದವು. ಚಂಡಮಾರುತವು ಸಂಪೂರ್ಣ ಶಿಥಿಲಗೊಳ್ಳುತ್ತಿದ್ದಂತೆಯೆ ಹಿಂಗಾರು ತನ್ನ ಸಾಂಪ್ರದಾಯಿಕ ಹಾದಿಗೆ ಮರಳಿದೆ. ಆದರೆ, ಉತ್ತರ ಭಾರತದ ಕಡೆಯಿಂದ ಶೀತ ಗಾಳಿಯೂ ಬೀಸುತ್ತಿರುವುದರಿಂದ ಪರಿಸ್ಥಿತಿ ಕಾದುನೋಡಬೇಕಾಗಿದೆ. ಈ ಮಧ್ಯೆ ನವೆಂಬರ್ 12 ರಂದು ಶ್ರೀಲಂಕಾ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈಗಿನಂತೆ ನವೆಂಬರ್ 12ರ ನಂತರ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡಿನ ಕೊಡಗು, ಹಾಸನ ಮತ್ತು ಕರಾವಳಿಯ ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಂದೆರಡು ಮಳೆಯ ಮುನ್ಸೂಚನೆಯೂ ಇದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…