ಹವಾಮಾನ ವರದಿ | 23-03-2025 | ಅಲ್ಲಲ್ಲಿ ಮಳೆ ನಿರೀಕ್ಷೆ | ಮಾ.25 ನಂತರ ಮಳೆ ಪ್ರಮಾಣ ಕಡಿಮೆಯಾಗುವ ಲಕ್ಷಣ

March 23, 2025
2:52 PM
ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ.ಕೊಡಗು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

24.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ಸಂಜೆ ಅಥವಾ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಮಾರ್ಚ್ 24 ಹಾಗೂ 25ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ

ಮಲೆನಾಡು : ಕೊಡಗು ಹಾಗೂ ಹಾಸನ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಮಾರ್ಚ್ 24 ಹಾಗೂ 25ರಂದು ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಮಳೆಯ ಇದೆ. ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಹನಿ ಸಾಧ್ಯತೆಯೂ ಇದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಒಳನಾಡು ಭಾಗಗಳಲ್ಲಿ ಮಾರ್ಚ್ 24ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ
April 23, 2025
3:13 PM
by: ಸಾಯಿಶೇಖರ್ ಕರಿಕಳ
ಬೆಳೆಗಾರರಿಂದ ಗ್ರಾಹಕರಿಗೆ ನೇರ ಮಾವು ಮಾರಾಟ | ಅಂಚೆ ಇಲಾಖೆಯಿಂದ 6 ವರ್ಷಗಳಿಂದ ಯಶಸ್ವಿ | ದೆಹಲಿಯವರೆಗೂ ಮಾವಿನಹಣ್ಣು ರವಾನೆ |
April 23, 2025
11:24 AM
by: ದ ರೂರಲ್ ಮಿರರ್.ಕಾಂ
ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!
April 23, 2025
8:13 AM
by: ದ ರೂರಲ್ ಮಿರರ್.ಕಾಂ
ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ
April 22, 2025
9:35 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group