ವೆದರ್ ಮಿರರ್

ಹವಾಮಾನ ವರದಿ | 24-03-2025 | ಇಂದು ಹಲವು ಕಡೆ ಮಳೆ ಸಾಧ್ಯತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

25.03.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಉತ್ತರ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ( ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗಾಳಿಯ ಸಹಿತ ಮಳೆಯಾದರೆ ಮಾತ್ರ ಜಿಲ್ಲೆಗಳ ಉಳಿದ ಭಾಗಗಳಿಗೆ ಮಳೆ ವ್ಯಾಪಿಸಬಹುದು ) ಈಗಿನಂತೆ ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.

ಮಲೆನಾಡು : ಕೊಡಗು ಮತ್ತು ಹಾಸನ ಜಿಲ್ಲೆಗಳ ಅಲ್ಲಲ್ಲಿ, ಚಿಕ್ಕಮಗಳೂರನ ಮೂಡಿಗೆರೆ, ಬಾಳೆಹೊನ್ನೂರು,ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಪಾತ್ರ ಮಹತ್ವದ್ದು. ಈಗಿನಂತೆ ಮುಂದಿನ 2 ದಿವಸಗಳ ಕಾಲ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ .
ದಕ್ಷಿಣ ಒಳನಾಡಿನ ಚಾಮರಾಜನಗರದ ಒಂದೆರಡು ಭಾಗಗಳಲ್ಲಿ, ಬೆಂಗಳೂರು – ತಮಿಳುನಾಡು ಗಡಿಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮುಂದಿನ 3 ದಿವಸಗಳ ಕಾಲ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ಒಳನಾಡು ಭಾಗಗಳಲ್ಲಿ ಮಳೆ ಕ್ಷೀಣಿಸುವ ಲಕ್ಷಣಗಳಿವೆ. ಆದರೆ ಮಾರ್ಚ್ 30 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

57 minutes ago

ಬದುಕು ಪುರಾಣ | ಯಕ್ಷಪ್ರಶ್ನೆಯೊಳಗೆ ಧರ್ಮ ಗೂಢತೆಯ ಗೊಂಚಲು

ಧರ್ಮರಾಯ ಮಹಾ ಜ್ಞಾನಿ. ಯಮಧರ್ಮನ ರೂಪಿನಲ್ಲಿದ್ದ ಯಕ್ಷನ ಧರ್ಮಸೂಕ್ಷ್ಮದ ಪ್ರಶ್ನೆಗಳಿಗೆ ಧರ್ಮದ ನೆಲೆಯಲ್ಲಿ…

20 hours ago

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

2 days ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

2 days ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

2 days ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

2 days ago