ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ನದಿ ಪಾತ್ರಗಳಿಗೆ 79 ಸಾವಿರದ 44 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನೀರಿನ ಮಟ್ಟ ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಸುಳಕೂಡ ಬ್ಯಾರೇಜ್ ಮುಖಾಂತರ ದೂಧಗಂಗಾ ನದಿಗೆ 16 ಸಾವಿರದ 544 ಕ್ಯೂಸೆಕ್ ಮತ್ತು ರಾಜಾಪುರ ಬ್ಯಾರೇಜ್ ಮುಖಾಂತರ ಕೃಷ್ಣಾ ನದಿಗೆ 62 ಸಾವಿರದ 500 ಕ್ಯೂಸೆಕ್ ನೀರು ರಾಜ್ಯಕ್ಕೆ ಹರಿದು ಬರುತ್ತಿದ್ದು, ನದಿಗಳ ಒಡಲು ತುಂಬಿ ಹರಿಯುತ್ತಿವೆ. ವೇದಗಂಗಾ ನದಿಯ ಬಾರವಾಡ-ಕುನ್ನೂರ, ಅಕ್ಕೊಳ-ಸಿದ್ದಾಳ, ಭೋಜ-ಶಿವಾಪುರವಾಡಿ, ದೂಧಗಂಗಾ ನದಿಯ ಕಾರದಗಾ-ಭೋಜ, ಮಲಿಕವಾಡ-ದತ್ತವಾಡ ಮತ್ತು ಕೃಷ್ಣಾ ನದಿಯ ಕಲ್ಲೋಳ-ಯಡೂರ, ಮಾಂಜರಿ-ಸವದತ್ತಿ ಬ್ಯಾರೇಜ್ಗಳು ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿವೆ.
ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ್ ಸಂಪಗಾವಿ ಮಾಹಿತಿ ನೀಡಿ,” ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಚಿಕ್ಕೋಡಿ ಉಪವಿಭಾಗದಲ್ಲಿ 6 ಸೇತುವೆಗಳು ಮುಳುಗಡೆಯಾಗಿವೆ. ಪ್ರವಾಹ ಪರಿಸ್ಥಿತಿ ಎದುರಿಸಲು ತಾಲೂಕಾಡಳಿತ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ” ಎಂದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…