ಮಳೆಗಾಲ ಆರಂಭವಾಗುತ್ತಿದೆ.ಜೂನ್.1 ರ ಬಳಿಕ ಮಳೆಗಾಲವೇ. ಈ ಬಾರಿ ಅದೇ ಸಮಯಕ್ಕೆ ಮಳೆ ಆರಂಭವಾಗುತ್ತಿದೆ. ಆದರೆ ಈಚೆಗೆ ಮುಂಗಾರು ಪೂರ್ವ ಮಳೆಯೂ ಉತ್ತಮವಾಗುತ್ತಿದೆ. ಕಾಡು ಹೊಂದಿರುವ ಪ್ರದೇಶಗಳಲ್ಲಿ ಈ ಬಾರಿಯೂ ಇದುವರೆಗೆ ಉತ್ತಮ ಮಳೆಯಾಗಿದೆ. ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ 2022 ರ ಮೇ ವರೆಗೆ 1108 ಮಿಮೀ ಮಳೆಯಾಗಿದೆ. ಮೇ ತಿಂಗಳಲ್ಲಿಯೇ ಈ ಬಾರಿ 708 ಮಿಮೀ ಮಳೆಯಾಗಿದೆ.
ಮಳೆ ದಾಖಲು ಮಾಡುವ ಕೃಷಿಕರು ದಕ್ಷಿಣ ಕನ್ನಡ ಹಾಗೂ ವಿವಿಧ ಜಿಲ್ಲೆಗಳಲ್ಲಿ ಇದ್ದಾರೆ. ಹವಾಮಾನ ವೀಕ್ಷಣೆ ಹಾಗೂ ಮಳೆ ಬೀಳುವ ಲೆಕ್ಕಾಚಾರ, ಬೀಳುವ ಮಳೆಯ ಲೆಕ್ಕ ಇದರ ಆಧಾರದಲ್ಲಿ ಕೃಷಿ ಕಾರ್ಯವನ್ನು ನಿರ್ಧರಿಸುವ ಯುವ ಕೃಷಿಕರೂ ಇದ್ದಾರೆ. ಕೃಷಿಕ ಪಿ ಜಿ ಎಸ್ ಎನ್ ಪ್ರಸಾದ್ ಅವರ ನೆರವಿನೊಂದಿಗೆ ಅನೇಕರು ಮಳೆ ಲೆಕ್ಕ ಆರಂಭಿಸಿದ್ದಾರೆ. ಕಳೆದ ಕೆಲವು ಸಮಯಗಳ ವೀಕ್ಷಣೆಯ ಪ್ರಕಾರ ಕಾಡಂಚಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಸುಬ್ರಹ್ಮಣ್ಯ, ಕಲ್ಲಾಜೆ, ಬಳ್ಪ, ಕಲ್ಮಡ್ಕ, ಎಣ್ಮೂರು, ಕಡಬ ಮೊದಲಾದ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತದೆ.ಕಳೆದ ವರ್ಷಕ್ಕಿಂತ ಈ ವರ್ಷ ಮಳೆ ಬಿದ್ದ ಪ್ರಮಾಣ ಹೆಚ್ಚಾಗಿದೆ.
ಈ ವರ್ಷ ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ ಮೇ ತಿಂಗಳ ಅಂತ್ಯದವರೆಗೆ 1108 ಮಿಮೀ ಮಳೆಯಾಗಿದೆ. ಮೆಟ್ಟಿನಡ್ಕದಲ್ಲಿ 944 ಮಿಮೀ, ಎಣ್ಮೂರು 909 ಮಿಮೀ, ಬಳ್ಪ ಕೋಡಿಗದ್ದೆಯಲ್ಲಿ 904 ಮಿಮೀ, ಬಾಳಿಲದಲ್ಲಿ 826 ಮಿಮೀ, ಕಮಿಲ ಪುಚ್ಚಪ್ಪಾಡಿಯಲ್ಲಿ 807 ಮಿಮೀ , ಕಡಬ ಕೋಡಿಂಬಾಳದಲ್ಲಿ 698 ಮಿಮೀ, ಬೆಳ್ಳಾರೆ ಕಾವಿನಮೂಲೆಯಲ್ಲಿ 630 ಮಿಮೀ, ಕೋಡಪದವಿನಲ್ಲಿ 361 ಮಿಮೀ. , ಮಳೆಯಾಗಿದೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…