Advertisement
The Rural Mirror ವಾರದ ವಿಶೇಷ

ಹವಾಮಾನ ಕುತೂಹಲ | ಕಲ್ಲಾಜೆಯಲ್ಲಿ ಇದುವರೆಗೆ 1108 ಮಿಮೀ ಮಳೆ |

Share
News Summary
| ಕೃಷಿ ಬೆಳವಣಿಗೆಗೆ ಮಳೆ ಅಗತ್ಯ. ಹಾಗಿದ್ದರೆ ನಮ್ಮಲ್ಲಿ ಎಷ್ಟು ಮಳೆಯಾಗುತ್ತದೆ ? ಈ ಲೆಕ್ಕವನ್ನು ಈಗ ಕೃಷಿಕರು ಹಾಕುತ್ತಿದ್ದಾರೆ. ಅಂತಹದೊಂದು ಲೆಕ್ಕದ ಪ್ರಕಾರ ಸುಳ್ಯ ಕಲ್ಲಾಜೆಯಲ್ಲಿ ಇದುವರೆಗೆ ಉತ್ತಮ ಮಳೆ ಬಿದ್ದಿದೆ. |

ಮಳೆಗಾಲ ಆರಂಭವಾಗುತ್ತಿದೆ.ಜೂನ್.‌1 ರ ಬಳಿಕ ಮಳೆಗಾಲವೇ. ಈ ಬಾರಿ ಅದೇ ಸಮಯಕ್ಕೆ ಮಳೆ ಆರಂಭವಾಗುತ್ತಿದೆ. ಆದರೆ ಈಚೆಗೆ ಮುಂಗಾರು ಪೂರ್ವ ಮಳೆಯೂ ಉತ್ತಮವಾಗುತ್ತಿದೆ. ಕಾಡು ಹೊಂದಿರುವ ಪ್ರದೇಶಗಳಲ್ಲಿ ಈ ಬಾರಿಯೂ ಇದುವರೆಗೆ ಉತ್ತಮ ಮಳೆಯಾಗಿದೆ. ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ  2022 ರ ಮೇ ವರೆಗೆ 1108 ಮಿಮೀ ಮಳೆಯಾಗಿದೆ. ಮೇ ತಿಂಗಳಲ್ಲಿಯೇ ಈ ಬಾರಿ 708 ಮಿಮೀ ಮಳೆಯಾಗಿದೆ.

ಮಳೆ ದಾಖಲು ಮಾಡುವ ಕೃಷಿಕರು ದಕ್ಷಿಣ ಕನ್ನಡ ಹಾಗೂ ವಿವಿಧ ಜಿಲ್ಲೆಗಳಲ್ಲಿ ಇದ್ದಾರೆ. ಹವಾಮಾನ ವೀಕ್ಷಣೆ ಹಾಗೂ ಮಳೆ ಬೀಳುವ ಲೆಕ್ಕಾಚಾರ, ಬೀಳುವ ಮಳೆಯ ಲೆಕ್ಕ ಇದರ ಆಧಾರದಲ್ಲಿ  ಕೃಷಿ ಕಾರ್ಯವನ್ನು ನಿರ್ಧರಿಸುವ ಯುವ ಕೃಷಿಕರೂ ಇದ್ದಾರೆ. ಕೃಷಿಕ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರ ನೆರವಿನೊಂದಿಗೆ ಅನೇಕರು ಮಳೆ ಲೆಕ್ಕ ಆರಂಭಿಸಿದ್ದಾರೆ.  ಕಳೆದ ಕೆಲವು ಸಮಯಗಳ ವೀಕ್ಷಣೆಯ ಪ್ರಕಾರ ಕಾಡಂಚಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಸುಬ್ರಹ್ಮಣ್ಯ, ಕಲ್ಲಾಜೆ, ಬಳ್ಪ, ಕಲ್ಮಡ್ಕ, ಎಣ್ಮೂರು, ಕಡಬ ಮೊದಲಾದ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತದೆ.ಕಳೆದ ವರ್ಷಕ್ಕಿಂತ ಈ ವರ್ಷ ಮಳೆ ಬಿದ್ದ ಪ್ರಮಾಣ ಹೆಚ್ಚಾಗಿದೆ.

ಈ ವರ್ಷ ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ  ಮೇ ತಿಂಗಳ ಅಂತ್ಯದವರೆಗೆ 1108 ಮಿಮೀ ಮಳೆಯಾಗಿದೆ. ಮೆಟ್ಟಿನಡ್ಕದಲ್ಲಿ 944 ಮಿಮೀ, ಎಣ್ಮೂರು 909 ಮಿಮೀ, ಬಳ್ಪ ಕೋಡಿಗದ್ದೆಯಲ್ಲಿ 904 ಮಿಮೀ, ಬಾಳಿಲದಲ್ಲಿ 826 ಮಿಮೀ, ಕಮಿಲ ಪುಚ್ಚಪ್ಪಾಡಿಯಲ್ಲಿ 807 ಮಿಮೀ , ಕಡಬ ಕೋಡಿಂಬಾಳದಲ್ಲಿ 698 ಮಿಮೀ,   ಬೆಳ್ಳಾರೆ ಕಾವಿನಮೂಲೆಯಲ್ಲಿ 630 ಮಿಮೀ, ಕೋಡಪದವಿನಲ್ಲಿ 361 ಮಿಮೀ.  ,  ಮಳೆಯಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

41 minutes ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

5 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

5 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

13 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

15 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago