Advertisement
The Rural Mirror ವಾರದ ವಿಶೇಷ

ಹವಾಮಾನ ಕುತೂಹಲ | ಕಲ್ಲಾಜೆಯಲ್ಲಿ ಇದುವರೆಗೆ 1108 ಮಿಮೀ ಮಳೆ |

Share
News Summary
| ಕೃಷಿ ಬೆಳವಣಿಗೆಗೆ ಮಳೆ ಅಗತ್ಯ. ಹಾಗಿದ್ದರೆ ನಮ್ಮಲ್ಲಿ ಎಷ್ಟು ಮಳೆಯಾಗುತ್ತದೆ ? ಈ ಲೆಕ್ಕವನ್ನು ಈಗ ಕೃಷಿಕರು ಹಾಕುತ್ತಿದ್ದಾರೆ. ಅಂತಹದೊಂದು ಲೆಕ್ಕದ ಪ್ರಕಾರ ಸುಳ್ಯ ಕಲ್ಲಾಜೆಯಲ್ಲಿ ಇದುವರೆಗೆ ಉತ್ತಮ ಮಳೆ ಬಿದ್ದಿದೆ. |

ಮಳೆಗಾಲ ಆರಂಭವಾಗುತ್ತಿದೆ.ಜೂನ್.‌1 ರ ಬಳಿಕ ಮಳೆಗಾಲವೇ. ಈ ಬಾರಿ ಅದೇ ಸಮಯಕ್ಕೆ ಮಳೆ ಆರಂಭವಾಗುತ್ತಿದೆ. ಆದರೆ ಈಚೆಗೆ ಮುಂಗಾರು ಪೂರ್ವ ಮಳೆಯೂ ಉತ್ತಮವಾಗುತ್ತಿದೆ. ಕಾಡು ಹೊಂದಿರುವ ಪ್ರದೇಶಗಳಲ್ಲಿ ಈ ಬಾರಿಯೂ ಇದುವರೆಗೆ ಉತ್ತಮ ಮಳೆಯಾಗಿದೆ. ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ  2022 ರ ಮೇ ವರೆಗೆ 1108 ಮಿಮೀ ಮಳೆಯಾಗಿದೆ. ಮೇ ತಿಂಗಳಲ್ಲಿಯೇ ಈ ಬಾರಿ 708 ಮಿಮೀ ಮಳೆಯಾಗಿದೆ.

ಮಳೆ ದಾಖಲು ಮಾಡುವ ಕೃಷಿಕರು ದಕ್ಷಿಣ ಕನ್ನಡ ಹಾಗೂ ವಿವಿಧ ಜಿಲ್ಲೆಗಳಲ್ಲಿ ಇದ್ದಾರೆ. ಹವಾಮಾನ ವೀಕ್ಷಣೆ ಹಾಗೂ ಮಳೆ ಬೀಳುವ ಲೆಕ್ಕಾಚಾರ, ಬೀಳುವ ಮಳೆಯ ಲೆಕ್ಕ ಇದರ ಆಧಾರದಲ್ಲಿ  ಕೃಷಿ ಕಾರ್ಯವನ್ನು ನಿರ್ಧರಿಸುವ ಯುವ ಕೃಷಿಕರೂ ಇದ್ದಾರೆ. ಕೃಷಿಕ ಪಿ ಜಿ ಎಸ್‌ ಎನ್‌ ಪ್ರಸಾದ್‌ ಅವರ ನೆರವಿನೊಂದಿಗೆ ಅನೇಕರು ಮಳೆ ಲೆಕ್ಕ ಆರಂಭಿಸಿದ್ದಾರೆ.  ಕಳೆದ ಕೆಲವು ಸಮಯಗಳ ವೀಕ್ಷಣೆಯ ಪ್ರಕಾರ ಕಾಡಂಚಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಸುಬ್ರಹ್ಮಣ್ಯ, ಕಲ್ಲಾಜೆ, ಬಳ್ಪ, ಕಲ್ಮಡ್ಕ, ಎಣ್ಮೂರು, ಕಡಬ ಮೊದಲಾದ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತದೆ.ಕಳೆದ ವರ್ಷಕ್ಕಿಂತ ಈ ವರ್ಷ ಮಳೆ ಬಿದ್ದ ಪ್ರಮಾಣ ಹೆಚ್ಚಾಗಿದೆ.

Advertisement

ಈ ವರ್ಷ ಸುಳ್ಯ ತಾಲೂಕಿನ ಕಲ್ಲಾಜೆಯಲ್ಲಿ  ಮೇ ತಿಂಗಳ ಅಂತ್ಯದವರೆಗೆ 1108 ಮಿಮೀ ಮಳೆಯಾಗಿದೆ. ಮೆಟ್ಟಿನಡ್ಕದಲ್ಲಿ 944 ಮಿಮೀ, ಎಣ್ಮೂರು 909 ಮಿಮೀ, ಬಳ್ಪ ಕೋಡಿಗದ್ದೆಯಲ್ಲಿ 904 ಮಿಮೀ, ಬಾಳಿಲದಲ್ಲಿ 826 ಮಿಮೀ, ಕಮಿಲ ಪುಚ್ಚಪ್ಪಾಡಿಯಲ್ಲಿ 807 ಮಿಮೀ , ಕಡಬ ಕೋಡಿಂಬಾಳದಲ್ಲಿ 698 ಮಿಮೀ,   ಬೆಳ್ಳಾರೆ ಕಾವಿನಮೂಲೆಯಲ್ಲಿ 630 ಮಿಮೀ, ಕೋಡಪದವಿನಲ್ಲಿ 361 ಮಿಮೀ.  ,  ಮಳೆಯಾಗಿದೆ.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

3 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

3 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

16 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

1 day ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago