#KarnatakaRains | ರಾಜ್ಯದಲ್ಲಿ ಮಳೆಯಿಂದಾಗಿ 2 ತಿಂಗಳಲ್ಲಿ541.39 ಹೆಕ್ಟೇರ್‌ನಲ್ಲಿ ಬೆಳೆ ಹಾನಿ |

July 30, 2023
7:30 AM
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಕಳೆದ 2 ತಿಂಗಳಲ್ಲಿ ಮಳೆಯ ಕಾರಣದಿಂದ ಪ್ರಾಥಮಿಕ ಅಂದಾಜಿನ ಪ್ರಕಾರ 541.39 ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಜೂನ್‌ ತಿಂಗಳ ಮೊದಲ ವಾರದಿಂದ ಮಳೆಗಾಲ ಆರಂಭವಾಗಿದೆ. ಕಳೆದ 2 ತಿಂಗಳಲ್ಲಿ ಮಳೆಯ ಕಾರಣದಿಂದ ಪ್ರಾಥಮಿಕ ಅಂದಾಜಿನ ಪ್ರಕಾರ 541.39 ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಕರ್ನಾಟಕದಲ್ಲಿ ಮಳೆಯಿಂದಾಗಿ 2 ತಿಂಗಳಲ್ಲಿ 34 ಮಂದಿ ಸಾವನ್ನಪ್ಪಿದ್ದಾರೆ, 35 ಜನರು ಗಾಯಗೊಂಡಿದ್ದಾರೆ ಮತ್ತು 105 ಪ್ರಾಣಿಗಳು ಸಾವನ್ನಪ್ಪಿವೆ. ಉಡುಪಿ ಮತ್ತು ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ 15 ಮಂದಿ ಸಾವನ್ನಪ್ಪಿದ್ದು, ಮಳೆಯ ಅಬ್ಬರಕ್ಕೆ ರಾಜ್ಯದಲ್ಲಿ ಒಟ್ಟು 34 ಮಂದಿ ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ರಾಜ್ಯವು ಭಾರೀ ಮಳೆಗೆ ಈ  ಸಾವುಗಳು ಸಂಭವಿಸಿವೆ. ನಿರಂತರ ಮಳೆಯಿಂದಾಗಿ ಒಟ್ಟು 1,802 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 22 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಒಟ್ಟು 189 ಸೇತುವೆಗಳು ಮತ್ತು ಮೋರಿಗಳು, 889 ಶಾಲೆಗಳು, 269 ಅಂಗನವಾಡಿ ಕೇಂದ್ರಗಳು, 11,995 ವಿದ್ಯುತ್ ಕಂಬಗಳು ಮತ್ತು 894 ಟ್ರಾನ್ಸ್‌ಫಾರ್ಮರ್‌ಗಳು ಮಳೆಯಿಂದ ಹಾನಿಗೊಳಗಾಗಿವೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 2,111 ಕಿಮೀ ರಸ್ತೆಗಳು, ಹಳ್ಳಿಗಳ ರಸ್ತೆಗಳು ಸಹ ಹಾಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror