Advertisement
MIRROR FOCUS

#KarnatakaRains | ರಾಜ್ಯದಲ್ಲಿ ಮಳೆಯಿಂದಾಗಿ 2 ತಿಂಗಳಲ್ಲಿ541.39 ಹೆಕ್ಟೇರ್‌ನಲ್ಲಿ ಬೆಳೆ ಹಾನಿ |

Share

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಜೂನ್‌ ತಿಂಗಳ ಮೊದಲ ವಾರದಿಂದ ಮಳೆಗಾಲ ಆರಂಭವಾಗಿದೆ. ಕಳೆದ 2 ತಿಂಗಳಲ್ಲಿ ಮಳೆಯ ಕಾರಣದಿಂದ ಪ್ರಾಥಮಿಕ ಅಂದಾಜಿನ ಪ್ರಕಾರ 541.39 ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.

ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಕರ್ನಾಟಕದಲ್ಲಿ ಮಳೆಯಿಂದಾಗಿ 2 ತಿಂಗಳಲ್ಲಿ 34 ಮಂದಿ ಸಾವನ್ನಪ್ಪಿದ್ದಾರೆ, 35 ಜನರು ಗಾಯಗೊಂಡಿದ್ದಾರೆ ಮತ್ತು 105 ಪ್ರಾಣಿಗಳು ಸಾವನ್ನಪ್ಪಿವೆ. ಉಡುಪಿ ಮತ್ತು ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ 15 ಮಂದಿ ಸಾವನ್ನಪ್ಪಿದ್ದು, ಮಳೆಯ ಅಬ್ಬರಕ್ಕೆ ರಾಜ್ಯದಲ್ಲಿ ಒಟ್ಟು 34 ಮಂದಿ ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ರಾಜ್ಯವು ಭಾರೀ ಮಳೆಗೆ ಈ  ಸಾವುಗಳು ಸಂಭವಿಸಿವೆ. ನಿರಂತರ ಮಳೆಯಿಂದಾಗಿ ಒಟ್ಟು 1,802 ಜನರನ್ನು ಸ್ಥಳಾಂತರಿಸಲಾಗಿದೆ ಮತ್ತು 22 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಒಟ್ಟು 189 ಸೇತುವೆಗಳು ಮತ್ತು ಮೋರಿಗಳು, 889 ಶಾಲೆಗಳು, 269 ಅಂಗನವಾಡಿ ಕೇಂದ್ರಗಳು, 11,995 ವಿದ್ಯುತ್ ಕಂಬಗಳು ಮತ್ತು 894 ಟ್ರಾನ್ಸ್‌ಫಾರ್ಮರ್‌ಗಳು ಮಳೆಯಿಂದ ಹಾನಿಗೊಳಗಾಗಿವೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 2,111 ಕಿಮೀ ರಸ್ತೆಗಳು, ಹಳ್ಳಿಗಳ ರಸ್ತೆಗಳು ಸಹ ಹಾಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

4 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

5 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

5 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

7 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

13 hours ago