Advertisement
ಸುದ್ದಿಗಳು

ಈಗಲೂ ಭಾರಿ ಮಳೆ ಕಂಡು ಕೃಷಿಕ ಸುರೇಶ್ಚಂದ್ರ ಹೇಳುತ್ತಾರೆ….. | ನಾಳೆ ರವಿ ಮೂಡಲಿ….. ! | ಕೃಷಿಕರ ಸಂಕಷ್ಟ ಹೀಗಿದೆ…. |

Share

ಇಳಿದು ಬಾ ತಾಯೀ ಇಳಿದು ಬಾ…
ಹರನ ಜಡೆಯಿಂದ,ಹರಿಯ ಅಡಿಯಿಂದ ಋಷಿಯ ತೊಡೆಯಿಂದ ನುಸುಳಿ ಬಾ..
ದೇವದೇವನನು ತಣಿಸಿ ಬಾ..
ದಿಗ್ ದಿಗಂತದಲಿ ಹನಿಸಿ ಬಾ… ಚರಾಚರಗಳಿಗೆ ಉಣಿಸಿ ಬಾ…ತಾಯೆ ಇಳಿದು ಬಾ….

…. ಎಂದು ಕರೆದು ಸ್ವಾಗತಿಸಿದ ವರುಣ ಮಳೆ ನಕ್ಷತ್ರಗಳ ಆದಿಯಾಗಿ ಸುರಿ ಸುರಿದು ಕೊನೆಯ ದಿನಗಳಿಗೆ ತಲುಪಿ, ತನ್ನ ಓಘದ ಓಟದ ಸ್ವಾತಿಯಿಂದ ರಿಲೇ ಕೋಲನ್ನು ಸೆಳೆದ ವಿಶಾಖ ತಾನೇನೂ ಕಡಿಮೆಯಲ್ಲವೆಂದೂ, ಮಳೆದಿನಗಳ ಬಾಲಂಗೋಚಿಯೆಂದು ಅಣಕಿಸಬೇಕಿಲ್ಲವೆಂದು ತನ್ನ ಮೊದಲ ದಿನವೇ ಪ್ರಚಂಡ ಪ್ರದರ್ಶನ ನೀಡಿ ಅಡಿಕೆ,ಭತ್ತ ಮುಂತಾದ ಬೆಳೆಗಾರರನ್ನು ಕಂಗಾಲು ಮಾಡಿದ. ಭಾರೀ ಮಳೆಯ ವಿಡಿಯೋ ಇಲ್ಲಿದೆ….

ಹೌದು, ಮಧ್ಯಾಹ್ನ ಹನ್ನೆರಡು ವರೆಗೇ ರವಿಯನ್ನು ಮರೆಮಾಚುವ ಮುಗಿಲೋಟವಿತ್ತು, ಆದರೆ.. ಮಳೆ ಸುರಿಯುವಂತಹ ಗಟ್ಟಿತನ ಇರಲಿಲ್ಲ…. ಆದರೂ ಎರಡು ಗಂಟೆಯ ಹೊತ್ತಿಗೆ ಬಾನೇ ತೂತಾದಂತೆ ವರುಣಾಘಾತವಾಯಿತು. ಕೃಷಿಕ ಏನು ತಾನೇ ಮಾಡಲು ಸಾಧ್ಯ. ಮಳೆಗಾಲದ ಕೊಳೆರೋಗದಿಂದ ಹೇಗೋ ಏನೋ ಸಾಹಸಮಾಡಿ ಉಳಿಸಿ,ಇದ್ದ ಬಿದ್ದ ಬೆಳೆಯನ್ನು ರೂಢಿ ಮಾಡಿಕೊಳ್ಳುವ ದಿನವಿದು .ಹಣ್ಣಾದ ಅಡಿಕೆ ಮರದಿಂದ ಬಿದ್ದು ನೀರುಪಾಲಾಗುವುದು ಒಂದು ಕಡೆಯಾದರೆ, ಹೆಕ್ಕಿ ತಂದು ಒಣಗಿಸಲು ಅಂಗಳದಲ್ಲಿ ಹರಗಿದರೆ ಕೊಳೆತು ಕಪ್ಪಾಗುವುದು ಇನ್ನೊಂದು ಕಡೆ. ಈ ವರ್ಷ ಪ್ಲಾಸ್ಟಿಕ್ ಅಂಗಡಿಯವರ ಶುಕ್ರದೆಸೆಯಿರಬಹುದು….ಅಡಿಕೆ ಒಣಗಿಸಲೋಸುಗ ವೀಡ್ ಮ್ಯಾಟ್, ಟರ್ಪಾಲ್ ಮುಂತಾಗಿ ಏನೇನೋ ಒದ್ದಾಡುತ್ತಿರುವ ಕೃಷಿಕ ಪ್ರತಿದಿನವೂ ಪೇಟೆ ಕಡೆ ಒಡೋಡಿ ಪ್ಲಾಸ್ಟಿಕ್ ತರುತ್ತಿರುವುದು ಸಾಮಾನ್ಯವಾಗಿದೆ. ಅಂಗಳವನ್ನು ಎತ್ತರಿಸುವುದು, ದೊಡ್ಡ ಪ್ರಮಾಣದ ಡ್ರಯರ್ ಗಳನ್ನು ಮಾಡುವುದು ಮುಂತಾಗಿ ಲಕ್ಷಗಟ್ಟಲೆ ಹಣ ಖರ್ಚಾಗುತ್ತಿದೆ.

ಅದಲ್ಲದೆ, ಈ ದಿನಗಳು,ಅಡಿಕೆ ಮರಗಳಲ್ಲಿ ಮುಂದಿನ ವರ್ಷದ ಫಸಲಿನ ನಿರ್ಣಾಯಕ ಕಾಲಘಟ್ಟವೂ ಹೌದು. ಸರಿಯಾದ ಸಮಯದಲ್ಲಿ ಸರಿಯಾದ ಗೊಬ್ಬರ ಕೊಟ್ಟು ಇನ್ನೇನು ತೆರೆದುಕೊಳ್ಳಲಿರುವ ಹಿಂಗಾರಕ್ಕೆ ಶಕ್ತಿ ನೀಡಬೇಕಾದ ಸಮಯ.ಆದರೆ ಹಾಕಿದ ಗೊಬ್ಬರವೆಲ್ಲಾ ನೀರುಪಾಲಾಗುವುದನ್ನು ತಡೆಯಲಾರದ ಹತಾಶ ಪರಿಸ್ಥಿತಿ ಕೃಷಿಕನದ್ದು. ಅಂತೂ ಕೃಷಿಕನ ಬದುಕು ಪ್ರತಿದಿನದ ಹೋರಾಟ ಎಂಬಂತಾಗಿದೆ.

ಆದರೂ ಕೃಷಿಕನ ಆಶಾಭಾವನೆ ಏನೆಂದರೆ, ಈ ಮುಗಿಲು ಕಳೆದು ನಾಳೆ ರವಿ ಮೂಡಲೇ ಬೇಕು, ಆಗ ತನ್ನ ಕೃಷಿ ಬದುಕು ಹಳಿಗೆ ಬಂದೀತೆಂಬ ಆಶಯ.

# ಸುರೇಶ್ಚಂದ್ರ ಟಿ ಆರ್‌, ಕಲ್ಮಡ್ಕ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

45 minutes ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

8 hours ago

ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ

ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…

9 hours ago

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ

ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…

1 day ago

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

1 day ago

ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ

ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…

1 day ago