ಸುದ್ದಿಗಳು

ಈಗಲೂ ಭಾರಿ ಮಳೆ ಕಂಡು ಕೃಷಿಕ ಸುರೇಶ್ಚಂದ್ರ ಹೇಳುತ್ತಾರೆ….. | ನಾಳೆ ರವಿ ಮೂಡಲಿ….. ! | ಕೃಷಿಕರ ಸಂಕಷ್ಟ ಹೀಗಿದೆ…. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಳಿದು ಬಾ ತಾಯೀ ಇಳಿದು ಬಾ…
ಹರನ ಜಡೆಯಿಂದ,ಹರಿಯ ಅಡಿಯಿಂದ ಋಷಿಯ ತೊಡೆಯಿಂದ ನುಸುಳಿ ಬಾ..
ದೇವದೇವನನು ತಣಿಸಿ ಬಾ..
ದಿಗ್ ದಿಗಂತದಲಿ ಹನಿಸಿ ಬಾ… ಚರಾಚರಗಳಿಗೆ ಉಣಿಸಿ ಬಾ…ತಾಯೆ ಇಳಿದು ಬಾ….

Advertisement

…. ಎಂದು ಕರೆದು ಸ್ವಾಗತಿಸಿದ ವರುಣ ಮಳೆ ನಕ್ಷತ್ರಗಳ ಆದಿಯಾಗಿ ಸುರಿ ಸುರಿದು ಕೊನೆಯ ದಿನಗಳಿಗೆ ತಲುಪಿ, ತನ್ನ ಓಘದ ಓಟದ ಸ್ವಾತಿಯಿಂದ ರಿಲೇ ಕೋಲನ್ನು ಸೆಳೆದ ವಿಶಾಖ ತಾನೇನೂ ಕಡಿಮೆಯಲ್ಲವೆಂದೂ, ಮಳೆದಿನಗಳ ಬಾಲಂಗೋಚಿಯೆಂದು ಅಣಕಿಸಬೇಕಿಲ್ಲವೆಂದು ತನ್ನ ಮೊದಲ ದಿನವೇ ಪ್ರಚಂಡ ಪ್ರದರ್ಶನ ನೀಡಿ ಅಡಿಕೆ,ಭತ್ತ ಮುಂತಾದ ಬೆಳೆಗಾರರನ್ನು ಕಂಗಾಲು ಮಾಡಿದ. ಭಾರೀ ಮಳೆಯ ವಿಡಿಯೋ ಇಲ್ಲಿದೆ….

ಹೌದು, ಮಧ್ಯಾಹ್ನ ಹನ್ನೆರಡು ವರೆಗೇ ರವಿಯನ್ನು ಮರೆಮಾಚುವ ಮುಗಿಲೋಟವಿತ್ತು, ಆದರೆ.. ಮಳೆ ಸುರಿಯುವಂತಹ ಗಟ್ಟಿತನ ಇರಲಿಲ್ಲ…. ಆದರೂ ಎರಡು ಗಂಟೆಯ ಹೊತ್ತಿಗೆ ಬಾನೇ ತೂತಾದಂತೆ ವರುಣಾಘಾತವಾಯಿತು. ಕೃಷಿಕ ಏನು ತಾನೇ ಮಾಡಲು ಸಾಧ್ಯ. ಮಳೆಗಾಲದ ಕೊಳೆರೋಗದಿಂದ ಹೇಗೋ ಏನೋ ಸಾಹಸಮಾಡಿ ಉಳಿಸಿ,ಇದ್ದ ಬಿದ್ದ ಬೆಳೆಯನ್ನು ರೂಢಿ ಮಾಡಿಕೊಳ್ಳುವ ದಿನವಿದು .ಹಣ್ಣಾದ ಅಡಿಕೆ ಮರದಿಂದ ಬಿದ್ದು ನೀರುಪಾಲಾಗುವುದು ಒಂದು ಕಡೆಯಾದರೆ, ಹೆಕ್ಕಿ ತಂದು ಒಣಗಿಸಲು ಅಂಗಳದಲ್ಲಿ ಹರಗಿದರೆ ಕೊಳೆತು ಕಪ್ಪಾಗುವುದು ಇನ್ನೊಂದು ಕಡೆ. ಈ ವರ್ಷ ಪ್ಲಾಸ್ಟಿಕ್ ಅಂಗಡಿಯವರ ಶುಕ್ರದೆಸೆಯಿರಬಹುದು….ಅಡಿಕೆ ಒಣಗಿಸಲೋಸುಗ ವೀಡ್ ಮ್ಯಾಟ್, ಟರ್ಪಾಲ್ ಮುಂತಾಗಿ ಏನೇನೋ ಒದ್ದಾಡುತ್ತಿರುವ ಕೃಷಿಕ ಪ್ರತಿದಿನವೂ ಪೇಟೆ ಕಡೆ ಒಡೋಡಿ ಪ್ಲಾಸ್ಟಿಕ್ ತರುತ್ತಿರುವುದು ಸಾಮಾನ್ಯವಾಗಿದೆ. ಅಂಗಳವನ್ನು ಎತ್ತರಿಸುವುದು, ದೊಡ್ಡ ಪ್ರಮಾಣದ ಡ್ರಯರ್ ಗಳನ್ನು ಮಾಡುವುದು ಮುಂತಾಗಿ ಲಕ್ಷಗಟ್ಟಲೆ ಹಣ ಖರ್ಚಾಗುತ್ತಿದೆ.

Advertisement

Advertisement

ಅದಲ್ಲದೆ, ಈ ದಿನಗಳು,ಅಡಿಕೆ ಮರಗಳಲ್ಲಿ ಮುಂದಿನ ವರ್ಷದ ಫಸಲಿನ ನಿರ್ಣಾಯಕ ಕಾಲಘಟ್ಟವೂ ಹೌದು. ಸರಿಯಾದ ಸಮಯದಲ್ಲಿ ಸರಿಯಾದ ಗೊಬ್ಬರ ಕೊಟ್ಟು ಇನ್ನೇನು ತೆರೆದುಕೊಳ್ಳಲಿರುವ ಹಿಂಗಾರಕ್ಕೆ ಶಕ್ತಿ ನೀಡಬೇಕಾದ ಸಮಯ.ಆದರೆ ಹಾಕಿದ ಗೊಬ್ಬರವೆಲ್ಲಾ ನೀರುಪಾಲಾಗುವುದನ್ನು ತಡೆಯಲಾರದ ಹತಾಶ ಪರಿಸ್ಥಿತಿ ಕೃಷಿಕನದ್ದು. ಅಂತೂ ಕೃಷಿಕನ ಬದುಕು ಪ್ರತಿದಿನದ ಹೋರಾಟ ಎಂಬಂತಾಗಿದೆ.

ಆದರೂ ಕೃಷಿಕನ ಆಶಾಭಾವನೆ ಏನೆಂದರೆ, ಈ ಮುಗಿಲು ಕಳೆದು ನಾಳೆ ರವಿ ಮೂಡಲೇ ಬೇಕು, ಆಗ ತನ್ನ ಕೃಷಿ ಬದುಕು ಹಳಿಗೆ ಬಂದೀತೆಂಬ ಆಶಯ.

# ಸುರೇಶ್ಚಂದ್ರ ಟಿ ಆರ್‌, ಕಲ್ಮಡ್ಕ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ | ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆ | ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ…

32 minutes ago

ಬಗರ್ ಹುಕುಂ ಸಾಗುವಳಿ | ಸಕ್ರಮಕ್ಕಾಗಿ 42289 ರೈತರಿಂದ ಅರ್ಜಿ

ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಕ್ಕಾಗಿ 42,289 ಮಂದಿ ಅರ್ಜಿ ಸಲ್ಲಿಸಿದ್ದಾರೆ…

57 minutes ago

ಶುದ್ಧ ಕನ್ನಡ ಪದ ಮತ್ತೆ ವಿಜೃಂಭಿಸಲಿ – ರಾಘವೇಶ್ವರ ಶ್ರೀ

ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ…

1 hour ago

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆ | ಪ್ರವಾಹಕ್ಕೆ ಏಳು ಮಂದಿ ಬಲಿ

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ…

1 hour ago

ದೇಶದ ಜಿಡಿಪಿಯಲ್ಲಿ ಗಮನಾರ್ಹ ಪ್ರಗತಿ

ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…

7 hours ago

ಹವಾಮಾನ ವರದಿ | 18-08-2025 | ವಾಯುಭಾರ ಕುಸಿತದ ಮಳೆಯ ಅಬ್ಬರ | ಆ.19-20 ರಿಂದ ಮಳೆ ಕಡಿಮೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್…

9 hours ago