ಸುದ್ದಿಗಳು

ಈಗಲೂ ಭಾರಿ ಮಳೆ ಕಂಡು ಕೃಷಿಕ ಸುರೇಶ್ಚಂದ್ರ ಹೇಳುತ್ತಾರೆ….. | ನಾಳೆ ರವಿ ಮೂಡಲಿ….. ! | ಕೃಷಿಕರ ಸಂಕಷ್ಟ ಹೀಗಿದೆ…. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಳಿದು ಬಾ ತಾಯೀ ಇಳಿದು ಬಾ…
ಹರನ ಜಡೆಯಿಂದ,ಹರಿಯ ಅಡಿಯಿಂದ ಋಷಿಯ ತೊಡೆಯಿಂದ ನುಸುಳಿ ಬಾ..
ದೇವದೇವನನು ತಣಿಸಿ ಬಾ..
ದಿಗ್ ದಿಗಂತದಲಿ ಹನಿಸಿ ಬಾ… ಚರಾಚರಗಳಿಗೆ ಉಣಿಸಿ ಬಾ…ತಾಯೆ ಇಳಿದು ಬಾ….

Advertisement

…. ಎಂದು ಕರೆದು ಸ್ವಾಗತಿಸಿದ ವರುಣ ಮಳೆ ನಕ್ಷತ್ರಗಳ ಆದಿಯಾಗಿ ಸುರಿ ಸುರಿದು ಕೊನೆಯ ದಿನಗಳಿಗೆ ತಲುಪಿ, ತನ್ನ ಓಘದ ಓಟದ ಸ್ವಾತಿಯಿಂದ ರಿಲೇ ಕೋಲನ್ನು ಸೆಳೆದ ವಿಶಾಖ ತಾನೇನೂ ಕಡಿಮೆಯಲ್ಲವೆಂದೂ, ಮಳೆದಿನಗಳ ಬಾಲಂಗೋಚಿಯೆಂದು ಅಣಕಿಸಬೇಕಿಲ್ಲವೆಂದು ತನ್ನ ಮೊದಲ ದಿನವೇ ಪ್ರಚಂಡ ಪ್ರದರ್ಶನ ನೀಡಿ ಅಡಿಕೆ,ಭತ್ತ ಮುಂತಾದ ಬೆಳೆಗಾರರನ್ನು ಕಂಗಾಲು ಮಾಡಿದ. ಭಾರೀ ಮಳೆಯ ವಿಡಿಯೋ ಇಲ್ಲಿದೆ….

ಹೌದು, ಮಧ್ಯಾಹ್ನ ಹನ್ನೆರಡು ವರೆಗೇ ರವಿಯನ್ನು ಮರೆಮಾಚುವ ಮುಗಿಲೋಟವಿತ್ತು, ಆದರೆ.. ಮಳೆ ಸುರಿಯುವಂತಹ ಗಟ್ಟಿತನ ಇರಲಿಲ್ಲ…. ಆದರೂ ಎರಡು ಗಂಟೆಯ ಹೊತ್ತಿಗೆ ಬಾನೇ ತೂತಾದಂತೆ ವರುಣಾಘಾತವಾಯಿತು. ಕೃಷಿಕ ಏನು ತಾನೇ ಮಾಡಲು ಸಾಧ್ಯ. ಮಳೆಗಾಲದ ಕೊಳೆರೋಗದಿಂದ ಹೇಗೋ ಏನೋ ಸಾಹಸಮಾಡಿ ಉಳಿಸಿ,ಇದ್ದ ಬಿದ್ದ ಬೆಳೆಯನ್ನು ರೂಢಿ ಮಾಡಿಕೊಳ್ಳುವ ದಿನವಿದು .ಹಣ್ಣಾದ ಅಡಿಕೆ ಮರದಿಂದ ಬಿದ್ದು ನೀರುಪಾಲಾಗುವುದು ಒಂದು ಕಡೆಯಾದರೆ, ಹೆಕ್ಕಿ ತಂದು ಒಣಗಿಸಲು ಅಂಗಳದಲ್ಲಿ ಹರಗಿದರೆ ಕೊಳೆತು ಕಪ್ಪಾಗುವುದು ಇನ್ನೊಂದು ಕಡೆ. ಈ ವರ್ಷ ಪ್ಲಾಸ್ಟಿಕ್ ಅಂಗಡಿಯವರ ಶುಕ್ರದೆಸೆಯಿರಬಹುದು….ಅಡಿಕೆ ಒಣಗಿಸಲೋಸುಗ ವೀಡ್ ಮ್ಯಾಟ್, ಟರ್ಪಾಲ್ ಮುಂತಾಗಿ ಏನೇನೋ ಒದ್ದಾಡುತ್ತಿರುವ ಕೃಷಿಕ ಪ್ರತಿದಿನವೂ ಪೇಟೆ ಕಡೆ ಒಡೋಡಿ ಪ್ಲಾಸ್ಟಿಕ್ ತರುತ್ತಿರುವುದು ಸಾಮಾನ್ಯವಾಗಿದೆ. ಅಂಗಳವನ್ನು ಎತ್ತರಿಸುವುದು, ದೊಡ್ಡ ಪ್ರಮಾಣದ ಡ್ರಯರ್ ಗಳನ್ನು ಮಾಡುವುದು ಮುಂತಾಗಿ ಲಕ್ಷಗಟ್ಟಲೆ ಹಣ ಖರ್ಚಾಗುತ್ತಿದೆ.

Advertisement

ಅದಲ್ಲದೆ, ಈ ದಿನಗಳು,ಅಡಿಕೆ ಮರಗಳಲ್ಲಿ ಮುಂದಿನ ವರ್ಷದ ಫಸಲಿನ ನಿರ್ಣಾಯಕ ಕಾಲಘಟ್ಟವೂ ಹೌದು. ಸರಿಯಾದ ಸಮಯದಲ್ಲಿ ಸರಿಯಾದ ಗೊಬ್ಬರ ಕೊಟ್ಟು ಇನ್ನೇನು ತೆರೆದುಕೊಳ್ಳಲಿರುವ ಹಿಂಗಾರಕ್ಕೆ ಶಕ್ತಿ ನೀಡಬೇಕಾದ ಸಮಯ.ಆದರೆ ಹಾಕಿದ ಗೊಬ್ಬರವೆಲ್ಲಾ ನೀರುಪಾಲಾಗುವುದನ್ನು ತಡೆಯಲಾರದ ಹತಾಶ ಪರಿಸ್ಥಿತಿ ಕೃಷಿಕನದ್ದು. ಅಂತೂ ಕೃಷಿಕನ ಬದುಕು ಪ್ರತಿದಿನದ ಹೋರಾಟ ಎಂಬಂತಾಗಿದೆ.

ಆದರೂ ಕೃಷಿಕನ ಆಶಾಭಾವನೆ ಏನೆಂದರೆ, ಈ ಮುಗಿಲು ಕಳೆದು ನಾಳೆ ರವಿ ಮೂಡಲೇ ಬೇಕು, ಆಗ ತನ್ನ ಕೃಷಿ ಬದುಕು ಹಳಿಗೆ ಬಂದೀತೆಂಬ ಆಶಯ.

# ಸುರೇಶ್ಚಂದ್ರ ಟಿ ಆರ್‌, ಕಲ್ಮಡ್ಕ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ

ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…

52 minutes ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…

1 hour ago

ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…

1 hour ago

ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?

ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…

2 hours ago

ಗುರು-ಬುಧನಿಂದ ಈ 5 ರಾಶಿಗೆ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago