Advertisement
ಸುದ್ದಿಗಳು

ಈಗಲೂ ಭಾರಿ ಮಳೆ ಕಂಡು ಕೃಷಿಕ ಸುರೇಶ್ಚಂದ್ರ ಹೇಳುತ್ತಾರೆ….. | ನಾಳೆ ರವಿ ಮೂಡಲಿ….. ! | ಕೃಷಿಕರ ಸಂಕಷ್ಟ ಹೀಗಿದೆ…. |

Share

ಇಳಿದು ಬಾ ತಾಯೀ ಇಳಿದು ಬಾ…
ಹರನ ಜಡೆಯಿಂದ,ಹರಿಯ ಅಡಿಯಿಂದ ಋಷಿಯ ತೊಡೆಯಿಂದ ನುಸುಳಿ ಬಾ..
ದೇವದೇವನನು ತಣಿಸಿ ಬಾ..
ದಿಗ್ ದಿಗಂತದಲಿ ಹನಿಸಿ ಬಾ… ಚರಾಚರಗಳಿಗೆ ಉಣಿಸಿ ಬಾ…ತಾಯೆ ಇಳಿದು ಬಾ….

…. ಎಂದು ಕರೆದು ಸ್ವಾಗತಿಸಿದ ವರುಣ ಮಳೆ ನಕ್ಷತ್ರಗಳ ಆದಿಯಾಗಿ ಸುರಿ ಸುರಿದು ಕೊನೆಯ ದಿನಗಳಿಗೆ ತಲುಪಿ, ತನ್ನ ಓಘದ ಓಟದ ಸ್ವಾತಿಯಿಂದ ರಿಲೇ ಕೋಲನ್ನು ಸೆಳೆದ ವಿಶಾಖ ತಾನೇನೂ ಕಡಿಮೆಯಲ್ಲವೆಂದೂ, ಮಳೆದಿನಗಳ ಬಾಲಂಗೋಚಿಯೆಂದು ಅಣಕಿಸಬೇಕಿಲ್ಲವೆಂದು ತನ್ನ ಮೊದಲ ದಿನವೇ ಪ್ರಚಂಡ ಪ್ರದರ್ಶನ ನೀಡಿ ಅಡಿಕೆ,ಭತ್ತ ಮುಂತಾದ ಬೆಳೆಗಾರರನ್ನು ಕಂಗಾಲು ಮಾಡಿದ. ಭಾರೀ ಮಳೆಯ ವಿಡಿಯೋ ಇಲ್ಲಿದೆ….

ಹೌದು, ಮಧ್ಯಾಹ್ನ ಹನ್ನೆರಡು ವರೆಗೇ ರವಿಯನ್ನು ಮರೆಮಾಚುವ ಮುಗಿಲೋಟವಿತ್ತು, ಆದರೆ.. ಮಳೆ ಸುರಿಯುವಂತಹ ಗಟ್ಟಿತನ ಇರಲಿಲ್ಲ…. ಆದರೂ ಎರಡು ಗಂಟೆಯ ಹೊತ್ತಿಗೆ ಬಾನೇ ತೂತಾದಂತೆ ವರುಣಾಘಾತವಾಯಿತು. ಕೃಷಿಕ ಏನು ತಾನೇ ಮಾಡಲು ಸಾಧ್ಯ. ಮಳೆಗಾಲದ ಕೊಳೆರೋಗದಿಂದ ಹೇಗೋ ಏನೋ ಸಾಹಸಮಾಡಿ ಉಳಿಸಿ,ಇದ್ದ ಬಿದ್ದ ಬೆಳೆಯನ್ನು ರೂಢಿ ಮಾಡಿಕೊಳ್ಳುವ ದಿನವಿದು .ಹಣ್ಣಾದ ಅಡಿಕೆ ಮರದಿಂದ ಬಿದ್ದು ನೀರುಪಾಲಾಗುವುದು ಒಂದು ಕಡೆಯಾದರೆ, ಹೆಕ್ಕಿ ತಂದು ಒಣಗಿಸಲು ಅಂಗಳದಲ್ಲಿ ಹರಗಿದರೆ ಕೊಳೆತು ಕಪ್ಪಾಗುವುದು ಇನ್ನೊಂದು ಕಡೆ. ಈ ವರ್ಷ ಪ್ಲಾಸ್ಟಿಕ್ ಅಂಗಡಿಯವರ ಶುಕ್ರದೆಸೆಯಿರಬಹುದು….ಅಡಿಕೆ ಒಣಗಿಸಲೋಸುಗ ವೀಡ್ ಮ್ಯಾಟ್, ಟರ್ಪಾಲ್ ಮುಂತಾಗಿ ಏನೇನೋ ಒದ್ದಾಡುತ್ತಿರುವ ಕೃಷಿಕ ಪ್ರತಿದಿನವೂ ಪೇಟೆ ಕಡೆ ಒಡೋಡಿ ಪ್ಲಾಸ್ಟಿಕ್ ತರುತ್ತಿರುವುದು ಸಾಮಾನ್ಯವಾಗಿದೆ. ಅಂಗಳವನ್ನು ಎತ್ತರಿಸುವುದು, ದೊಡ್ಡ ಪ್ರಮಾಣದ ಡ್ರಯರ್ ಗಳನ್ನು ಮಾಡುವುದು ಮುಂತಾಗಿ ಲಕ್ಷಗಟ್ಟಲೆ ಹಣ ಖರ್ಚಾಗುತ್ತಿದೆ.

ಅದಲ್ಲದೆ, ಈ ದಿನಗಳು,ಅಡಿಕೆ ಮರಗಳಲ್ಲಿ ಮುಂದಿನ ವರ್ಷದ ಫಸಲಿನ ನಿರ್ಣಾಯಕ ಕಾಲಘಟ್ಟವೂ ಹೌದು. ಸರಿಯಾದ ಸಮಯದಲ್ಲಿ ಸರಿಯಾದ ಗೊಬ್ಬರ ಕೊಟ್ಟು ಇನ್ನೇನು ತೆರೆದುಕೊಳ್ಳಲಿರುವ ಹಿಂಗಾರಕ್ಕೆ ಶಕ್ತಿ ನೀಡಬೇಕಾದ ಸಮಯ.ಆದರೆ ಹಾಕಿದ ಗೊಬ್ಬರವೆಲ್ಲಾ ನೀರುಪಾಲಾಗುವುದನ್ನು ತಡೆಯಲಾರದ ಹತಾಶ ಪರಿಸ್ಥಿತಿ ಕೃಷಿಕನದ್ದು. ಅಂತೂ ಕೃಷಿಕನ ಬದುಕು ಪ್ರತಿದಿನದ ಹೋರಾಟ ಎಂಬಂತಾಗಿದೆ.

ಆದರೂ ಕೃಷಿಕನ ಆಶಾಭಾವನೆ ಏನೆಂದರೆ, ಈ ಮುಗಿಲು ಕಳೆದು ನಾಳೆ ರವಿ ಮೂಡಲೇ ಬೇಕು, ಆಗ ತನ್ನ ಕೃಷಿ ಬದುಕು ಹಳಿಗೆ ಬಂದೀತೆಂಬ ಆಶಯ.

# ಸುರೇಶ್ಚಂದ್ರ ಟಿ ಆರ್‌, ಕಲ್ಮಡ್ಕ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

11 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

11 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

11 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

11 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago