Advertisement
ಸುದ್ದಿಗಳು

ಈಗಲೂ ಭಾರಿ ಮಳೆ ಕಂಡು ಕೃಷಿಕ ಸುರೇಶ್ಚಂದ್ರ ಹೇಳುತ್ತಾರೆ….. | ನಾಳೆ ರವಿ ಮೂಡಲಿ….. ! | ಕೃಷಿಕರ ಸಂಕಷ್ಟ ಹೀಗಿದೆ…. |

Share

ಇಳಿದು ಬಾ ತಾಯೀ ಇಳಿದು ಬಾ…
ಹರನ ಜಡೆಯಿಂದ,ಹರಿಯ ಅಡಿಯಿಂದ ಋಷಿಯ ತೊಡೆಯಿಂದ ನುಸುಳಿ ಬಾ..
ದೇವದೇವನನು ತಣಿಸಿ ಬಾ..
ದಿಗ್ ದಿಗಂತದಲಿ ಹನಿಸಿ ಬಾ… ಚರಾಚರಗಳಿಗೆ ಉಣಿಸಿ ಬಾ…ತಾಯೆ ಇಳಿದು ಬಾ….

…. ಎಂದು ಕರೆದು ಸ್ವಾಗತಿಸಿದ ವರುಣ ಮಳೆ ನಕ್ಷತ್ರಗಳ ಆದಿಯಾಗಿ ಸುರಿ ಸುರಿದು ಕೊನೆಯ ದಿನಗಳಿಗೆ ತಲುಪಿ, ತನ್ನ ಓಘದ ಓಟದ ಸ್ವಾತಿಯಿಂದ ರಿಲೇ ಕೋಲನ್ನು ಸೆಳೆದ ವಿಶಾಖ ತಾನೇನೂ ಕಡಿಮೆಯಲ್ಲವೆಂದೂ, ಮಳೆದಿನಗಳ ಬಾಲಂಗೋಚಿಯೆಂದು ಅಣಕಿಸಬೇಕಿಲ್ಲವೆಂದು ತನ್ನ ಮೊದಲ ದಿನವೇ ಪ್ರಚಂಡ ಪ್ರದರ್ಶನ ನೀಡಿ ಅಡಿಕೆ,ಭತ್ತ ಮುಂತಾದ ಬೆಳೆಗಾರರನ್ನು ಕಂಗಾಲು ಮಾಡಿದ. ಭಾರೀ ಮಳೆಯ ವಿಡಿಯೋ ಇಲ್ಲಿದೆ….

ಹೌದು, ಮಧ್ಯಾಹ್ನ ಹನ್ನೆರಡು ವರೆಗೇ ರವಿಯನ್ನು ಮರೆಮಾಚುವ ಮುಗಿಲೋಟವಿತ್ತು, ಆದರೆ.. ಮಳೆ ಸುರಿಯುವಂತಹ ಗಟ್ಟಿತನ ಇರಲಿಲ್ಲ…. ಆದರೂ ಎರಡು ಗಂಟೆಯ ಹೊತ್ತಿಗೆ ಬಾನೇ ತೂತಾದಂತೆ ವರುಣಾಘಾತವಾಯಿತು. ಕೃಷಿಕ ಏನು ತಾನೇ ಮಾಡಲು ಸಾಧ್ಯ. ಮಳೆಗಾಲದ ಕೊಳೆರೋಗದಿಂದ ಹೇಗೋ ಏನೋ ಸಾಹಸಮಾಡಿ ಉಳಿಸಿ,ಇದ್ದ ಬಿದ್ದ ಬೆಳೆಯನ್ನು ರೂಢಿ ಮಾಡಿಕೊಳ್ಳುವ ದಿನವಿದು .ಹಣ್ಣಾದ ಅಡಿಕೆ ಮರದಿಂದ ಬಿದ್ದು ನೀರುಪಾಲಾಗುವುದು ಒಂದು ಕಡೆಯಾದರೆ, ಹೆಕ್ಕಿ ತಂದು ಒಣಗಿಸಲು ಅಂಗಳದಲ್ಲಿ ಹರಗಿದರೆ ಕೊಳೆತು ಕಪ್ಪಾಗುವುದು ಇನ್ನೊಂದು ಕಡೆ. ಈ ವರ್ಷ ಪ್ಲಾಸ್ಟಿಕ್ ಅಂಗಡಿಯವರ ಶುಕ್ರದೆಸೆಯಿರಬಹುದು….ಅಡಿಕೆ ಒಣಗಿಸಲೋಸುಗ ವೀಡ್ ಮ್ಯಾಟ್, ಟರ್ಪಾಲ್ ಮುಂತಾಗಿ ಏನೇನೋ ಒದ್ದಾಡುತ್ತಿರುವ ಕೃಷಿಕ ಪ್ರತಿದಿನವೂ ಪೇಟೆ ಕಡೆ ಒಡೋಡಿ ಪ್ಲಾಸ್ಟಿಕ್ ತರುತ್ತಿರುವುದು ಸಾಮಾನ್ಯವಾಗಿದೆ. ಅಂಗಳವನ್ನು ಎತ್ತರಿಸುವುದು, ದೊಡ್ಡ ಪ್ರಮಾಣದ ಡ್ರಯರ್ ಗಳನ್ನು ಮಾಡುವುದು ಮುಂತಾಗಿ ಲಕ್ಷಗಟ್ಟಲೆ ಹಣ ಖರ್ಚಾಗುತ್ತಿದೆ.

ಅದಲ್ಲದೆ, ಈ ದಿನಗಳು,ಅಡಿಕೆ ಮರಗಳಲ್ಲಿ ಮುಂದಿನ ವರ್ಷದ ಫಸಲಿನ ನಿರ್ಣಾಯಕ ಕಾಲಘಟ್ಟವೂ ಹೌದು. ಸರಿಯಾದ ಸಮಯದಲ್ಲಿ ಸರಿಯಾದ ಗೊಬ್ಬರ ಕೊಟ್ಟು ಇನ್ನೇನು ತೆರೆದುಕೊಳ್ಳಲಿರುವ ಹಿಂಗಾರಕ್ಕೆ ಶಕ್ತಿ ನೀಡಬೇಕಾದ ಸಮಯ.ಆದರೆ ಹಾಕಿದ ಗೊಬ್ಬರವೆಲ್ಲಾ ನೀರುಪಾಲಾಗುವುದನ್ನು ತಡೆಯಲಾರದ ಹತಾಶ ಪರಿಸ್ಥಿತಿ ಕೃಷಿಕನದ್ದು. ಅಂತೂ ಕೃಷಿಕನ ಬದುಕು ಪ್ರತಿದಿನದ ಹೋರಾಟ ಎಂಬಂತಾಗಿದೆ.

ಆದರೂ ಕೃಷಿಕನ ಆಶಾಭಾವನೆ ಏನೆಂದರೆ, ಈ ಮುಗಿಲು ಕಳೆದು ನಾಳೆ ರವಿ ಮೂಡಲೇ ಬೇಕು, ಆಗ ತನ್ನ ಕೃಷಿ ಬದುಕು ಹಳಿಗೆ ಬಂದೀತೆಂಬ ಆಶಯ.

# ಸುರೇಶ್ಚಂದ್ರ ಟಿ ಆರ್‌, ಕಲ್ಮಡ್ಕ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

5 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

6 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

13 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

14 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

21 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

24 hours ago