Advertisement
ಸುದ್ದಿಗಳು

ಈಗಲೂ ಭಾರಿ ಮಳೆ ಕಂಡು ಕೃಷಿಕ ಸುರೇಶ್ಚಂದ್ರ ಹೇಳುತ್ತಾರೆ….. | ನಾಳೆ ರವಿ ಮೂಡಲಿ….. ! | ಕೃಷಿಕರ ಸಂಕಷ್ಟ ಹೀಗಿದೆ…. |

Share

ಇಳಿದು ಬಾ ತಾಯೀ ಇಳಿದು ಬಾ…
ಹರನ ಜಡೆಯಿಂದ,ಹರಿಯ ಅಡಿಯಿಂದ ಋಷಿಯ ತೊಡೆಯಿಂದ ನುಸುಳಿ ಬಾ..
ದೇವದೇವನನು ತಣಿಸಿ ಬಾ..
ದಿಗ್ ದಿಗಂತದಲಿ ಹನಿಸಿ ಬಾ… ಚರಾಚರಗಳಿಗೆ ಉಣಿಸಿ ಬಾ…ತಾಯೆ ಇಳಿದು ಬಾ….

…. ಎಂದು ಕರೆದು ಸ್ವಾಗತಿಸಿದ ವರುಣ ಮಳೆ ನಕ್ಷತ್ರಗಳ ಆದಿಯಾಗಿ ಸುರಿ ಸುರಿದು ಕೊನೆಯ ದಿನಗಳಿಗೆ ತಲುಪಿ, ತನ್ನ ಓಘದ ಓಟದ ಸ್ವಾತಿಯಿಂದ ರಿಲೇ ಕೋಲನ್ನು ಸೆಳೆದ ವಿಶಾಖ ತಾನೇನೂ ಕಡಿಮೆಯಲ್ಲವೆಂದೂ, ಮಳೆದಿನಗಳ ಬಾಲಂಗೋಚಿಯೆಂದು ಅಣಕಿಸಬೇಕಿಲ್ಲವೆಂದು ತನ್ನ ಮೊದಲ ದಿನವೇ ಪ್ರಚಂಡ ಪ್ರದರ್ಶನ ನೀಡಿ ಅಡಿಕೆ,ಭತ್ತ ಮುಂತಾದ ಬೆಳೆಗಾರರನ್ನು ಕಂಗಾಲು ಮಾಡಿದ. ಭಾರೀ ಮಳೆಯ ವಿಡಿಯೋ ಇಲ್ಲಿದೆ….

ಹೌದು, ಮಧ್ಯಾಹ್ನ ಹನ್ನೆರಡು ವರೆಗೇ ರವಿಯನ್ನು ಮರೆಮಾಚುವ ಮುಗಿಲೋಟವಿತ್ತು, ಆದರೆ.. ಮಳೆ ಸುರಿಯುವಂತಹ ಗಟ್ಟಿತನ ಇರಲಿಲ್ಲ…. ಆದರೂ ಎರಡು ಗಂಟೆಯ ಹೊತ್ತಿಗೆ ಬಾನೇ ತೂತಾದಂತೆ ವರುಣಾಘಾತವಾಯಿತು. ಕೃಷಿಕ ಏನು ತಾನೇ ಮಾಡಲು ಸಾಧ್ಯ. ಮಳೆಗಾಲದ ಕೊಳೆರೋಗದಿಂದ ಹೇಗೋ ಏನೋ ಸಾಹಸಮಾಡಿ ಉಳಿಸಿ,ಇದ್ದ ಬಿದ್ದ ಬೆಳೆಯನ್ನು ರೂಢಿ ಮಾಡಿಕೊಳ್ಳುವ ದಿನವಿದು .ಹಣ್ಣಾದ ಅಡಿಕೆ ಮರದಿಂದ ಬಿದ್ದು ನೀರುಪಾಲಾಗುವುದು ಒಂದು ಕಡೆಯಾದರೆ, ಹೆಕ್ಕಿ ತಂದು ಒಣಗಿಸಲು ಅಂಗಳದಲ್ಲಿ ಹರಗಿದರೆ ಕೊಳೆತು ಕಪ್ಪಾಗುವುದು ಇನ್ನೊಂದು ಕಡೆ. ಈ ವರ್ಷ ಪ್ಲಾಸ್ಟಿಕ್ ಅಂಗಡಿಯವರ ಶುಕ್ರದೆಸೆಯಿರಬಹುದು….ಅಡಿಕೆ ಒಣಗಿಸಲೋಸುಗ ವೀಡ್ ಮ್ಯಾಟ್, ಟರ್ಪಾಲ್ ಮುಂತಾಗಿ ಏನೇನೋ ಒದ್ದಾಡುತ್ತಿರುವ ಕೃಷಿಕ ಪ್ರತಿದಿನವೂ ಪೇಟೆ ಕಡೆ ಒಡೋಡಿ ಪ್ಲಾಸ್ಟಿಕ್ ತರುತ್ತಿರುವುದು ಸಾಮಾನ್ಯವಾಗಿದೆ. ಅಂಗಳವನ್ನು ಎತ್ತರಿಸುವುದು, ದೊಡ್ಡ ಪ್ರಮಾಣದ ಡ್ರಯರ್ ಗಳನ್ನು ಮಾಡುವುದು ಮುಂತಾಗಿ ಲಕ್ಷಗಟ್ಟಲೆ ಹಣ ಖರ್ಚಾಗುತ್ತಿದೆ.

ಅದಲ್ಲದೆ, ಈ ದಿನಗಳು,ಅಡಿಕೆ ಮರಗಳಲ್ಲಿ ಮುಂದಿನ ವರ್ಷದ ಫಸಲಿನ ನಿರ್ಣಾಯಕ ಕಾಲಘಟ್ಟವೂ ಹೌದು. ಸರಿಯಾದ ಸಮಯದಲ್ಲಿ ಸರಿಯಾದ ಗೊಬ್ಬರ ಕೊಟ್ಟು ಇನ್ನೇನು ತೆರೆದುಕೊಳ್ಳಲಿರುವ ಹಿಂಗಾರಕ್ಕೆ ಶಕ್ತಿ ನೀಡಬೇಕಾದ ಸಮಯ.ಆದರೆ ಹಾಕಿದ ಗೊಬ್ಬರವೆಲ್ಲಾ ನೀರುಪಾಲಾಗುವುದನ್ನು ತಡೆಯಲಾರದ ಹತಾಶ ಪರಿಸ್ಥಿತಿ ಕೃಷಿಕನದ್ದು. ಅಂತೂ ಕೃಷಿಕನ ಬದುಕು ಪ್ರತಿದಿನದ ಹೋರಾಟ ಎಂಬಂತಾಗಿದೆ.

ಆದರೂ ಕೃಷಿಕನ ಆಶಾಭಾವನೆ ಏನೆಂದರೆ, ಈ ಮುಗಿಲು ಕಳೆದು ನಾಳೆ ರವಿ ಮೂಡಲೇ ಬೇಕು, ಆಗ ತನ್ನ ಕೃಷಿ ಬದುಕು ಹಳಿಗೆ ಬಂದೀತೆಂಬ ಆಶಯ.

# ಸುರೇಶ್ಚಂದ್ರ ಟಿ ಆರ್‌, ಕಲ್ಮಡ್ಕ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago