Advertisement
ಸುದ್ದಿಗಳು

ಈಗಲೂ ಭಾರಿ ಮಳೆ ಕಂಡು ಕೃಷಿಕ ಸುರೇಶ್ಚಂದ್ರ ಹೇಳುತ್ತಾರೆ….. | ನಾಳೆ ರವಿ ಮೂಡಲಿ….. ! | ಕೃಷಿಕರ ಸಂಕಷ್ಟ ಹೀಗಿದೆ…. |

Share

ಇಳಿದು ಬಾ ತಾಯೀ ಇಳಿದು ಬಾ…
ಹರನ ಜಡೆಯಿಂದ,ಹರಿಯ ಅಡಿಯಿಂದ ಋಷಿಯ ತೊಡೆಯಿಂದ ನುಸುಳಿ ಬಾ..
ದೇವದೇವನನು ತಣಿಸಿ ಬಾ..
ದಿಗ್ ದಿಗಂತದಲಿ ಹನಿಸಿ ಬಾ… ಚರಾಚರಗಳಿಗೆ ಉಣಿಸಿ ಬಾ…ತಾಯೆ ಇಳಿದು ಬಾ….

…. ಎಂದು ಕರೆದು ಸ್ವಾಗತಿಸಿದ ವರುಣ ಮಳೆ ನಕ್ಷತ್ರಗಳ ಆದಿಯಾಗಿ ಸುರಿ ಸುರಿದು ಕೊನೆಯ ದಿನಗಳಿಗೆ ತಲುಪಿ, ತನ್ನ ಓಘದ ಓಟದ ಸ್ವಾತಿಯಿಂದ ರಿಲೇ ಕೋಲನ್ನು ಸೆಳೆದ ವಿಶಾಖ ತಾನೇನೂ ಕಡಿಮೆಯಲ್ಲವೆಂದೂ, ಮಳೆದಿನಗಳ ಬಾಲಂಗೋಚಿಯೆಂದು ಅಣಕಿಸಬೇಕಿಲ್ಲವೆಂದು ತನ್ನ ಮೊದಲ ದಿನವೇ ಪ್ರಚಂಡ ಪ್ರದರ್ಶನ ನೀಡಿ ಅಡಿಕೆ,ಭತ್ತ ಮುಂತಾದ ಬೆಳೆಗಾರರನ್ನು ಕಂಗಾಲು ಮಾಡಿದ. ಭಾರೀ ಮಳೆಯ ವಿಡಿಯೋ ಇಲ್ಲಿದೆ….

ಹೌದು, ಮಧ್ಯಾಹ್ನ ಹನ್ನೆರಡು ವರೆಗೇ ರವಿಯನ್ನು ಮರೆಮಾಚುವ ಮುಗಿಲೋಟವಿತ್ತು, ಆದರೆ.. ಮಳೆ ಸುರಿಯುವಂತಹ ಗಟ್ಟಿತನ ಇರಲಿಲ್ಲ…. ಆದರೂ ಎರಡು ಗಂಟೆಯ ಹೊತ್ತಿಗೆ ಬಾನೇ ತೂತಾದಂತೆ ವರುಣಾಘಾತವಾಯಿತು. ಕೃಷಿಕ ಏನು ತಾನೇ ಮಾಡಲು ಸಾಧ್ಯ. ಮಳೆಗಾಲದ ಕೊಳೆರೋಗದಿಂದ ಹೇಗೋ ಏನೋ ಸಾಹಸಮಾಡಿ ಉಳಿಸಿ,ಇದ್ದ ಬಿದ್ದ ಬೆಳೆಯನ್ನು ರೂಢಿ ಮಾಡಿಕೊಳ್ಳುವ ದಿನವಿದು .ಹಣ್ಣಾದ ಅಡಿಕೆ ಮರದಿಂದ ಬಿದ್ದು ನೀರುಪಾಲಾಗುವುದು ಒಂದು ಕಡೆಯಾದರೆ, ಹೆಕ್ಕಿ ತಂದು ಒಣಗಿಸಲು ಅಂಗಳದಲ್ಲಿ ಹರಗಿದರೆ ಕೊಳೆತು ಕಪ್ಪಾಗುವುದು ಇನ್ನೊಂದು ಕಡೆ. ಈ ವರ್ಷ ಪ್ಲಾಸ್ಟಿಕ್ ಅಂಗಡಿಯವರ ಶುಕ್ರದೆಸೆಯಿರಬಹುದು….ಅಡಿಕೆ ಒಣಗಿಸಲೋಸುಗ ವೀಡ್ ಮ್ಯಾಟ್, ಟರ್ಪಾಲ್ ಮುಂತಾಗಿ ಏನೇನೋ ಒದ್ದಾಡುತ್ತಿರುವ ಕೃಷಿಕ ಪ್ರತಿದಿನವೂ ಪೇಟೆ ಕಡೆ ಒಡೋಡಿ ಪ್ಲಾಸ್ಟಿಕ್ ತರುತ್ತಿರುವುದು ಸಾಮಾನ್ಯವಾಗಿದೆ. ಅಂಗಳವನ್ನು ಎತ್ತರಿಸುವುದು, ದೊಡ್ಡ ಪ್ರಮಾಣದ ಡ್ರಯರ್ ಗಳನ್ನು ಮಾಡುವುದು ಮುಂತಾಗಿ ಲಕ್ಷಗಟ್ಟಲೆ ಹಣ ಖರ್ಚಾಗುತ್ತಿದೆ.

ಅದಲ್ಲದೆ, ಈ ದಿನಗಳು,ಅಡಿಕೆ ಮರಗಳಲ್ಲಿ ಮುಂದಿನ ವರ್ಷದ ಫಸಲಿನ ನಿರ್ಣಾಯಕ ಕಾಲಘಟ್ಟವೂ ಹೌದು. ಸರಿಯಾದ ಸಮಯದಲ್ಲಿ ಸರಿಯಾದ ಗೊಬ್ಬರ ಕೊಟ್ಟು ಇನ್ನೇನು ತೆರೆದುಕೊಳ್ಳಲಿರುವ ಹಿಂಗಾರಕ್ಕೆ ಶಕ್ತಿ ನೀಡಬೇಕಾದ ಸಮಯ.ಆದರೆ ಹಾಕಿದ ಗೊಬ್ಬರವೆಲ್ಲಾ ನೀರುಪಾಲಾಗುವುದನ್ನು ತಡೆಯಲಾರದ ಹತಾಶ ಪರಿಸ್ಥಿತಿ ಕೃಷಿಕನದ್ದು. ಅಂತೂ ಕೃಷಿಕನ ಬದುಕು ಪ್ರತಿದಿನದ ಹೋರಾಟ ಎಂಬಂತಾಗಿದೆ.

ಆದರೂ ಕೃಷಿಕನ ಆಶಾಭಾವನೆ ಏನೆಂದರೆ, ಈ ಮುಗಿಲು ಕಳೆದು ನಾಳೆ ರವಿ ಮೂಡಲೇ ಬೇಕು, ಆಗ ತನ್ನ ಕೃಷಿ ಬದುಕು ಹಳಿಗೆ ಬಂದೀತೆಂಬ ಆಶಯ.

# ಸುರೇಶ್ಚಂದ್ರ ಟಿ ಆರ್‌, ಕಲ್ಮಡ್ಕ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

13 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

19 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago