Advertisement
ಸುದ್ದಿಗಳು

ಈಗಲೂ ಭಾರಿ ಮಳೆ ಕಂಡು ಕೃಷಿಕ ಸುರೇಶ್ಚಂದ್ರ ಹೇಳುತ್ತಾರೆ….. | ನಾಳೆ ರವಿ ಮೂಡಲಿ….. ! | ಕೃಷಿಕರ ಸಂಕಷ್ಟ ಹೀಗಿದೆ…. |

Share

ಇಳಿದು ಬಾ ತಾಯೀ ಇಳಿದು ಬಾ…
ಹರನ ಜಡೆಯಿಂದ,ಹರಿಯ ಅಡಿಯಿಂದ ಋಷಿಯ ತೊಡೆಯಿಂದ ನುಸುಳಿ ಬಾ..
ದೇವದೇವನನು ತಣಿಸಿ ಬಾ..
ದಿಗ್ ದಿಗಂತದಲಿ ಹನಿಸಿ ಬಾ… ಚರಾಚರಗಳಿಗೆ ಉಣಿಸಿ ಬಾ…ತಾಯೆ ಇಳಿದು ಬಾ….

…. ಎಂದು ಕರೆದು ಸ್ವಾಗತಿಸಿದ ವರುಣ ಮಳೆ ನಕ್ಷತ್ರಗಳ ಆದಿಯಾಗಿ ಸುರಿ ಸುರಿದು ಕೊನೆಯ ದಿನಗಳಿಗೆ ತಲುಪಿ, ತನ್ನ ಓಘದ ಓಟದ ಸ್ವಾತಿಯಿಂದ ರಿಲೇ ಕೋಲನ್ನು ಸೆಳೆದ ವಿಶಾಖ ತಾನೇನೂ ಕಡಿಮೆಯಲ್ಲವೆಂದೂ, ಮಳೆದಿನಗಳ ಬಾಲಂಗೋಚಿಯೆಂದು ಅಣಕಿಸಬೇಕಿಲ್ಲವೆಂದು ತನ್ನ ಮೊದಲ ದಿನವೇ ಪ್ರಚಂಡ ಪ್ರದರ್ಶನ ನೀಡಿ ಅಡಿಕೆ,ಭತ್ತ ಮುಂತಾದ ಬೆಳೆಗಾರರನ್ನು ಕಂಗಾಲು ಮಾಡಿದ. ಭಾರೀ ಮಳೆಯ ವಿಡಿಯೋ ಇಲ್ಲಿದೆ….

ಹೌದು, ಮಧ್ಯಾಹ್ನ ಹನ್ನೆರಡು ವರೆಗೇ ರವಿಯನ್ನು ಮರೆಮಾಚುವ ಮುಗಿಲೋಟವಿತ್ತು, ಆದರೆ.. ಮಳೆ ಸುರಿಯುವಂತಹ ಗಟ್ಟಿತನ ಇರಲಿಲ್ಲ…. ಆದರೂ ಎರಡು ಗಂಟೆಯ ಹೊತ್ತಿಗೆ ಬಾನೇ ತೂತಾದಂತೆ ವರುಣಾಘಾತವಾಯಿತು. ಕೃಷಿಕ ಏನು ತಾನೇ ಮಾಡಲು ಸಾಧ್ಯ. ಮಳೆಗಾಲದ ಕೊಳೆರೋಗದಿಂದ ಹೇಗೋ ಏನೋ ಸಾಹಸಮಾಡಿ ಉಳಿಸಿ,ಇದ್ದ ಬಿದ್ದ ಬೆಳೆಯನ್ನು ರೂಢಿ ಮಾಡಿಕೊಳ್ಳುವ ದಿನವಿದು .ಹಣ್ಣಾದ ಅಡಿಕೆ ಮರದಿಂದ ಬಿದ್ದು ನೀರುಪಾಲಾಗುವುದು ಒಂದು ಕಡೆಯಾದರೆ, ಹೆಕ್ಕಿ ತಂದು ಒಣಗಿಸಲು ಅಂಗಳದಲ್ಲಿ ಹರಗಿದರೆ ಕೊಳೆತು ಕಪ್ಪಾಗುವುದು ಇನ್ನೊಂದು ಕಡೆ. ಈ ವರ್ಷ ಪ್ಲಾಸ್ಟಿಕ್ ಅಂಗಡಿಯವರ ಶುಕ್ರದೆಸೆಯಿರಬಹುದು….ಅಡಿಕೆ ಒಣಗಿಸಲೋಸುಗ ವೀಡ್ ಮ್ಯಾಟ್, ಟರ್ಪಾಲ್ ಮುಂತಾಗಿ ಏನೇನೋ ಒದ್ದಾಡುತ್ತಿರುವ ಕೃಷಿಕ ಪ್ರತಿದಿನವೂ ಪೇಟೆ ಕಡೆ ಒಡೋಡಿ ಪ್ಲಾಸ್ಟಿಕ್ ತರುತ್ತಿರುವುದು ಸಾಮಾನ್ಯವಾಗಿದೆ. ಅಂಗಳವನ್ನು ಎತ್ತರಿಸುವುದು, ದೊಡ್ಡ ಪ್ರಮಾಣದ ಡ್ರಯರ್ ಗಳನ್ನು ಮಾಡುವುದು ಮುಂತಾಗಿ ಲಕ್ಷಗಟ್ಟಲೆ ಹಣ ಖರ್ಚಾಗುತ್ತಿದೆ.

ಅದಲ್ಲದೆ, ಈ ದಿನಗಳು,ಅಡಿಕೆ ಮರಗಳಲ್ಲಿ ಮುಂದಿನ ವರ್ಷದ ಫಸಲಿನ ನಿರ್ಣಾಯಕ ಕಾಲಘಟ್ಟವೂ ಹೌದು. ಸರಿಯಾದ ಸಮಯದಲ್ಲಿ ಸರಿಯಾದ ಗೊಬ್ಬರ ಕೊಟ್ಟು ಇನ್ನೇನು ತೆರೆದುಕೊಳ್ಳಲಿರುವ ಹಿಂಗಾರಕ್ಕೆ ಶಕ್ತಿ ನೀಡಬೇಕಾದ ಸಮಯ.ಆದರೆ ಹಾಕಿದ ಗೊಬ್ಬರವೆಲ್ಲಾ ನೀರುಪಾಲಾಗುವುದನ್ನು ತಡೆಯಲಾರದ ಹತಾಶ ಪರಿಸ್ಥಿತಿ ಕೃಷಿಕನದ್ದು. ಅಂತೂ ಕೃಷಿಕನ ಬದುಕು ಪ್ರತಿದಿನದ ಹೋರಾಟ ಎಂಬಂತಾಗಿದೆ.

ಆದರೂ ಕೃಷಿಕನ ಆಶಾಭಾವನೆ ಏನೆಂದರೆ, ಈ ಮುಗಿಲು ಕಳೆದು ನಾಳೆ ರವಿ ಮೂಡಲೇ ಬೇಕು, ಆಗ ತನ್ನ ಕೃಷಿ ಬದುಕು ಹಳಿಗೆ ಬಂದೀತೆಂಬ ಆಶಯ.

# ಸುರೇಶ್ಚಂದ್ರ ಟಿ ಆರ್‌, ಕಲ್ಮಡ್ಕ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

15 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago