Advertisement
ಸುದ್ದಿಗಳು

ಈಗಲೂ ಭಾರಿ ಮಳೆ ಕಂಡು ಕೃಷಿಕ ಸುರೇಶ್ಚಂದ್ರ ಹೇಳುತ್ತಾರೆ….. | ನಾಳೆ ರವಿ ಮೂಡಲಿ….. ! | ಕೃಷಿಕರ ಸಂಕಷ್ಟ ಹೀಗಿದೆ…. |

Share

ಇಳಿದು ಬಾ ತಾಯೀ ಇಳಿದು ಬಾ…
ಹರನ ಜಡೆಯಿಂದ,ಹರಿಯ ಅಡಿಯಿಂದ ಋಷಿಯ ತೊಡೆಯಿಂದ ನುಸುಳಿ ಬಾ..
ದೇವದೇವನನು ತಣಿಸಿ ಬಾ..
ದಿಗ್ ದಿಗಂತದಲಿ ಹನಿಸಿ ಬಾ… ಚರಾಚರಗಳಿಗೆ ಉಣಿಸಿ ಬಾ…ತಾಯೆ ಇಳಿದು ಬಾ….

…. ಎಂದು ಕರೆದು ಸ್ವಾಗತಿಸಿದ ವರುಣ ಮಳೆ ನಕ್ಷತ್ರಗಳ ಆದಿಯಾಗಿ ಸುರಿ ಸುರಿದು ಕೊನೆಯ ದಿನಗಳಿಗೆ ತಲುಪಿ, ತನ್ನ ಓಘದ ಓಟದ ಸ್ವಾತಿಯಿಂದ ರಿಲೇ ಕೋಲನ್ನು ಸೆಳೆದ ವಿಶಾಖ ತಾನೇನೂ ಕಡಿಮೆಯಲ್ಲವೆಂದೂ, ಮಳೆದಿನಗಳ ಬಾಲಂಗೋಚಿಯೆಂದು ಅಣಕಿಸಬೇಕಿಲ್ಲವೆಂದು ತನ್ನ ಮೊದಲ ದಿನವೇ ಪ್ರಚಂಡ ಪ್ರದರ್ಶನ ನೀಡಿ ಅಡಿಕೆ,ಭತ್ತ ಮುಂತಾದ ಬೆಳೆಗಾರರನ್ನು ಕಂಗಾಲು ಮಾಡಿದ. ಭಾರೀ ಮಳೆಯ ವಿಡಿಯೋ ಇಲ್ಲಿದೆ….

ಹೌದು, ಮಧ್ಯಾಹ್ನ ಹನ್ನೆರಡು ವರೆಗೇ ರವಿಯನ್ನು ಮರೆಮಾಚುವ ಮುಗಿಲೋಟವಿತ್ತು, ಆದರೆ.. ಮಳೆ ಸುರಿಯುವಂತಹ ಗಟ್ಟಿತನ ಇರಲಿಲ್ಲ…. ಆದರೂ ಎರಡು ಗಂಟೆಯ ಹೊತ್ತಿಗೆ ಬಾನೇ ತೂತಾದಂತೆ ವರುಣಾಘಾತವಾಯಿತು. ಕೃಷಿಕ ಏನು ತಾನೇ ಮಾಡಲು ಸಾಧ್ಯ. ಮಳೆಗಾಲದ ಕೊಳೆರೋಗದಿಂದ ಹೇಗೋ ಏನೋ ಸಾಹಸಮಾಡಿ ಉಳಿಸಿ,ಇದ್ದ ಬಿದ್ದ ಬೆಳೆಯನ್ನು ರೂಢಿ ಮಾಡಿಕೊಳ್ಳುವ ದಿನವಿದು .ಹಣ್ಣಾದ ಅಡಿಕೆ ಮರದಿಂದ ಬಿದ್ದು ನೀರುಪಾಲಾಗುವುದು ಒಂದು ಕಡೆಯಾದರೆ, ಹೆಕ್ಕಿ ತಂದು ಒಣಗಿಸಲು ಅಂಗಳದಲ್ಲಿ ಹರಗಿದರೆ ಕೊಳೆತು ಕಪ್ಪಾಗುವುದು ಇನ್ನೊಂದು ಕಡೆ. ಈ ವರ್ಷ ಪ್ಲಾಸ್ಟಿಕ್ ಅಂಗಡಿಯವರ ಶುಕ್ರದೆಸೆಯಿರಬಹುದು….ಅಡಿಕೆ ಒಣಗಿಸಲೋಸುಗ ವೀಡ್ ಮ್ಯಾಟ್, ಟರ್ಪಾಲ್ ಮುಂತಾಗಿ ಏನೇನೋ ಒದ್ದಾಡುತ್ತಿರುವ ಕೃಷಿಕ ಪ್ರತಿದಿನವೂ ಪೇಟೆ ಕಡೆ ಒಡೋಡಿ ಪ್ಲಾಸ್ಟಿಕ್ ತರುತ್ತಿರುವುದು ಸಾಮಾನ್ಯವಾಗಿದೆ. ಅಂಗಳವನ್ನು ಎತ್ತರಿಸುವುದು, ದೊಡ್ಡ ಪ್ರಮಾಣದ ಡ್ರಯರ್ ಗಳನ್ನು ಮಾಡುವುದು ಮುಂತಾಗಿ ಲಕ್ಷಗಟ್ಟಲೆ ಹಣ ಖರ್ಚಾಗುತ್ತಿದೆ.

ಅದಲ್ಲದೆ, ಈ ದಿನಗಳು,ಅಡಿಕೆ ಮರಗಳಲ್ಲಿ ಮುಂದಿನ ವರ್ಷದ ಫಸಲಿನ ನಿರ್ಣಾಯಕ ಕಾಲಘಟ್ಟವೂ ಹೌದು. ಸರಿಯಾದ ಸಮಯದಲ್ಲಿ ಸರಿಯಾದ ಗೊಬ್ಬರ ಕೊಟ್ಟು ಇನ್ನೇನು ತೆರೆದುಕೊಳ್ಳಲಿರುವ ಹಿಂಗಾರಕ್ಕೆ ಶಕ್ತಿ ನೀಡಬೇಕಾದ ಸಮಯ.ಆದರೆ ಹಾಕಿದ ಗೊಬ್ಬರವೆಲ್ಲಾ ನೀರುಪಾಲಾಗುವುದನ್ನು ತಡೆಯಲಾರದ ಹತಾಶ ಪರಿಸ್ಥಿತಿ ಕೃಷಿಕನದ್ದು. ಅಂತೂ ಕೃಷಿಕನ ಬದುಕು ಪ್ರತಿದಿನದ ಹೋರಾಟ ಎಂಬಂತಾಗಿದೆ.

ಆದರೂ ಕೃಷಿಕನ ಆಶಾಭಾವನೆ ಏನೆಂದರೆ, ಈ ಮುಗಿಲು ಕಳೆದು ನಾಳೆ ರವಿ ಮೂಡಲೇ ಬೇಕು, ಆಗ ತನ್ನ ಕೃಷಿ ಬದುಕು ಹಳಿಗೆ ಬಂದೀತೆಂಬ ಆಶಯ.

# ಸುರೇಶ್ಚಂದ್ರ ಟಿ ಆರ್‌, ಕಲ್ಮಡ್ಕ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

22 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago