Advertisement
Opinion

ಮಳೆ….. ಅಂದು….ಇಂದು.. ಕೇಳಿ ಬಿಡಬಹುದಿತ್ತು ವರುಣನನ್ನು…!

Share

ಪ್ರಕೃತಿ ಆರಾಧನೆಯೇ
ಪರಮಾರಾಧನೆ
ಪ್ರಕೃತಿಯೊಲ್ಮೆಯೇ
ಮುಕ್ತಿಯಾನಂದ ಸಾಧನೆ – ಕುವೆಂಪು

ಮಳೆ.. ಅಂದು..ಇಂದು
ಅಂದು.. :  ನನ್ನ ಬಾಲ್ಯದ ದಿನಗಳು.. ಮಳೆಗಾಲದ ಸಮಯ ದಿನ ಗಟ್ಟಲೆ ಧೋ ಎಂದು ಮಳೆ ಸುರಿಯುತ್ತಿತ್ತು. ರವಿ ಕಾಣದ ದಿನಗಳು ಅದೆಷ್ಟೋ.. ಹಳ್ಳ ಕೊಳ್ಳ ದಾಟಿ ಶಾಲೆ ಸೇರುವುದೇ ಒಂದು ಸಾಹಸ ದ ಕೆಲಸವಾಗಿತ್ತು. ಇತ್ತ ಮನೆಯಲ್ಲೂ ..ಹಿರಿಯರಿಗೆ ಮಕ್ಕಳು ಶಾಲೆ ಬಿಟ್ಟು ಮನೆ ಸೇರುವವರೆಗೂ ಆತಂಕ. ಒಂದೆಡೆ ಕೃಷಿ ಚಟುವಟಿಕೆ ಗಳಿಗೂ ತೊಂದರೆ. ಅಡಿಕೆ ತೋಟಗಳಿಗೆ ಔಷಧಿ ಸಿಂಪಡಣೆಯೂ ಕಷ್ಟದ ಕೆಲಸವಾಗಿತ್ತು. ದಿನಕರ ಕಣ್ತೆರೆದರೆ, ಕೆಲಸದವರು ಲಭ್ಯವಿ ದ್ದರೆ ಔಷಧ ಸಿಂಪಡಣೆ ! ‘ ಈ ಬರ್ಸೊಗು ನಾಲ್ ಪೆಲತ್ತರಿ ಇತ್ತ್ ನಾಯೆ ಇಲ್ಲ್ ಪಿದಡಾಯೆ ‘ ಎಂಬ ಮಾತಿತ್ತು. ಅಂದರೆ ಹಲಸಿನ ಕಾಯಿಯ ನಾಲ್ಕು ಬೇಳೆ ತನ್ನ ಸಂಗ್ರಹದಲ್ಲಿ ಇದ್ದಾತ ಕೂಲಿ ಕೆಲಸ ಕ್ಕಂತ ಮನೆ ಹೊರಡಲಾರ, ಅದನ್ನೇ ಅಂದಿನ ಆಹಾರವಾಗಿಸಿ ಕೊಳ್ಳಬಲ್ಲ… ಎಂಬುದು ಆ ರೂಢಿ ಮಾತಿನ ಅರ್ಥ. ‘ಒಂದು ಮಳೆ ಬಂದರೆ ಎತ್ತಿನ ಎರಡೂ ಕೊಂಬು ಒದ್ದೆಯಾಗಬೇಕಿಲ್ಲ ‘.. ಎಂಬ ಹಿರಿಯರ ಮಾತಿದ್ದರೂ ಮಳೆಯ ಹಂಚಿಕೆಯಲ್ಲಿ ಪ್ರದೇಶದಿಂದ ಪ್ರದೇಶಕ್ಕೆ ಭಾರೀ ವ್ಯತ್ಯಾಸವೇನೂ ಇರುತ್ತಿರಲಿಲ್ಲ. ಅಪರೂಪದಲ್ಲಿ ಆಟಿ ತಿಂಗಳಲ್ಲಿ (ಜುಲೈ ತಿಂಗಳ 15/16 ರ ಬಳಿಕ) ಬಿಸಿಲು ಕಾದರೆ ಅದು ಕೃಷಿ ಚಟುವಟಿಕೆಗೆ ಪೂರಕ ಆಗ್ತಿತ್ತು.  “ಆಟಿತ ದೊಂಬುಗು ಆನೆತ ಬೆರಿ ಪುಡಾವು” .ಅಂದರೆ ಆಟಿ ತಿಂಗಳ ಬಿಸಿಲ ಪ್ರಖರತೆಗೆ ಆನೆಯ ಬೆನ್ನು ಒಡೆದೀತು..ಎಂಬುದು ಹಿರಿಯ ರ ಮಾತಾಗಿತ್ತು.

ಇಂದು : ಮಳೆ ಸುರಿವ ಕ್ರಮ ಬದಲಾಗಿದೆ. ದಿನಗಟ್ಟಲೆ ಮಳೆ ಸುರಿಯುವುದು ಅಪರೂಪವಾಗಿದೆ. ಕನಿಷ್ಟ ಅವಧಿಯಲ್ಲಿ ಗರಿಷ್ಟ ಮಳೆ ಸುರಿವ ಮೇಘಸ್ಪೋಟದಂತಹ ವಿದ್ಯಮಾನವನ್ನು ಹೆಚ್ಚು ಹೆಚ್ಚು ಕಾಣುತ್ತಿದ್ದೇವೆ. ಆವಿಯಾದ ನೀರು ಮಳೆಯಾಗಿ ಸುರಿಯಲೇ ಬೇಕು ! ಈಗೀಗ, ಎಲ್ಲೋ ನಗರ ಪ್ರದೇಶದಲ್ಲೋ, ಗುಡ್ಡಗಾಡು ಪ್ರದೇಶಗಳಲ್ಲೋ ಹೆಚ್ಚಿನ ಮಳೆ ಸುರಿಯುತ್ತಿದೆ.

ಸರಾಸರಿ ಮಳೆಯ ಪ್ರಮಾಣ :  
1976 ರಿಂದ 2000 = 4611 ಮಿ.ಮೀ. 2001 ರಿಂದ 2025 = 4536 ಮಿ.ಮೀ. ತುಲನಾತ್ಮಕವಾಗಿ ದೀರ್ಘಾವಧಿ ಸರಾಸರಿ ಕಳೆದ ಶತಮಾನದ ಕೊನೆಯ 25 ವರ್ಷ ಹಾಗೆ, ಈ ಶತಮಾನದ ಆರಂಭ ದ 25 ವರ್ಷಗಳ ಸರಾಸರಿ ಕೂಡಾ ಹೆಚ್ಚು ಕಡಿಮೆ ಒಂದೇ ರೀತಿ (4535ಮಿ.ಮೀ.) ಇರುವುದು ಇಲ್ಲಿ ಗಮನಿಸಬಹುದಾದ ಅಂಶ. ವಾರ್ಷಿಕ ಸರಾಸರಿ ಮಳೆ ಸುರಿವ ದಿನಗಳು 165. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಅಂದಿನ “ಮಳೆ ನಾಡ” ವೈಭವ ಇಂದಿಲ್ಲ !.. ಮುಂದೆ..?.  ಕೇಳಿ ಬಿಡಬಹುದಿತ್ತು ವರುಣನನ್ನು ಇದೆಂತಹ ಉದ್ಧಟತನವೆಂದು…
ಆದರೆ ಪ್ರಶ್ನಿಸುವ ಯೋಗ್ಯತೆ ನಾವು ಉಳಿಸಿಕೊಂಡಿಲ್ಲವಲ್ಲ…. …… ಮುಂದೆ ಓದಿ……

(ಅಂಕಿ ಅಂಶಗಳು *ಬಾಳಿಲದಲ್ಲಿ ದಾಖಲಾದ ಮಳೆಯ ಪ್ರಮಾಣ)

ಬರಹ :
ಪಿ ಜಿ ಎಸ್ ಎನ್ ಪ್ರಸಾದ್ ಬಾಳಿಲ
ಪಿಜಿಎಸ್‌ಎನ್‌ ಪ್ರಸಾದ್, ಬಾಳಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

8 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

18 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

24 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago