Advertisement
ವೆದರ್ ಮಿರರ್

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

Share

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಮಧ್ಯ ಬಿಡುವಿನ ಅವಧಿ ಕಡಿಮೆ ಇರಬಹುದು. ಈಗಿನಂತೆ ಆಗಸ್ಟ್ 17 ರಿಂದ 20 ರ ತನಕ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ, 17 ರಿಂದ 19 ರ ತನಕ ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸಾಧ್ಯತೆಗಳಿವೆ. ನಂತರ ಕಡಿಮೆಯಾಗಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 17ರಿಂದ 19ರ ತನಕ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರುವ ಸೂಚನೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ದಾವಣಗೆರೆ, ವಿಜಯಪುರ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಆಗಸ್ಟ್ 20 ರ ತನಕವೂ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ. ನಂತರ ಬಿಸಿಲಿನ ವಾತಾವರಣ ಇರಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

11 hours ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

12 hours ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

12 hours ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

16 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

3 days ago