ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ದಿನಗಳಿಂದ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ.
ಇಂದು ಕೂಡ ಮಳೆ ಮುಂದುವರೆಯಲಿದ್ದು, ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ಉಡುಪಿ ದಕ್ಷಿಣ ಕನ್ನಡ ಭಾಗದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಅತೀ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆ ಬಿರು ಬಿಸಿಲಿನ ವಾತಾವರಣ ಕಾಣಿಸಿಕೊಂಡಿದೆ.ಇದೀಗ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಚಿಕ್ಕೋಡಿ, ರಾಯಭಾಗ, ಬೈಲಹೊಂಗಲ, ಕಲಘಟಗಿ, ಹಳಿಯಾಳ, ರಾಯಭಾಗ, ಬೈಲಹೊಂಗಲ, ಬೀದರ್, ಭಾಲ್ಕಿ, ನಿಪ್ಪಾಣಿ, ಸದಗಲ, ಇಂಡಿ, ಮಹಾಲಿಂಗಪುರದಲ್ಲಿ ಕಳೆದ ೨೪ ಗಂಡೆಯಲ್ಲಿ ಸಾಧಾರಣ ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರೆಯಲಿದ್ದು, ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…