ಮಳೆಗಾಲದಲ್ಲಿ ನಿರೀಕ್ಷೆಯಷ್ಟು ಮಳೆ ಬರದೇ ಹೋಯಿತು. ಬರದ ಛಾಯೆ ಆವರಿಸಿತು. ಚಳಿಗಾಲ ಬಂದಾಗಲೂ ಚಳಿ ದೂರವಾಯಿತು. ಈ ಬಾರಿ 18 ಡಿಗ್ರಿಗಿಂತ ಕಡಿಮೆ ಚಳಿ ಇಲ್ಲದೇ ಹೋಯಿತು. ಈಗ ಮತ್ತೆ ಮಳೆ ಶುರುವಾಗಿದೆ. ಕೆಲವು ಕಡೆ ಉತ್ತಮ ಮಳೆ, ಇನ್ನೂ ಕೆಲವು ಕಡೆ ತುಂತುರು ಮಳೆ ಕರಾವಳಿ ಪ್ರದೇಶದಲ್ಲಿ ಕಾಣಿಸಿದೆ. ಒಟ್ಟಾರೆ ಈ ಬಾರಿ ಹವಾಮಾನ ಕೈಕೊಟ್ಟಿದೆ. ಕೃಷಿ, ಗ್ರಾಮೀಣ ಭಾಗ ಸಂಕಷ್ಟಕ್ಕೆ ಸಿಲುಕುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಕಡಬ ,ಪುತ್ತೂರು, ಸುಳ್ಯ, ಬಂಟ್ವಾಳ ಭಾಗದಲ್ಲಿ ಬುಧವಾರ ಮುಂಜಾನೆ ಸುಮಾರು ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಮಂಗಳವಾರ ಸಂಜೆಯಿಂದಲೇ ತುಂತುರು ಮಳೆಯ ಸಿಂಚನವಾಗುತ್ತಿದ್ದು ಮೋಡ ಕವಿದ ವಾತಾವರಣವಿತ್ತು.ಕಾಸರಗೋಡು ಕಡೆ 2 ಮಿಮೀ ವರೆಗೆ ಮಳೆಯಾದರೆ ಬಂಟ್ವಾಳ ಪ್ರದೇಶದಲ್ಲಿ 5 ಮಿಮೀ ಮಳೆಯಾಗಿದೆ.
ಧನುರ್ಮಾಸದಲ್ಲಿ ವಿಪರೀತ ಚಳಿ ಇರುವುದು ಪದ್ಧತಿ. ಆದರೆ ಈಗ ಅಕಾಲಿಕ ಮಳೆ ಕೃಷಿಕರಿಗೂ ಸಂಕಷ್ಟ. ಅಡಿಕೆ ಬೆಳೆ ಸಹಿತ ಎಲ್ಲಾ ಕೃಷಿಕರಿಗೂ ಸಂಕಷ್ಟ. ಅಡಿಕೆ ಒಣಗಿಸಲು ಹರಸಾಹಸ, ರಬ್ಬರ್ ಇಳುವರಿ ಕುಂಠಿತವಾಗಿದೆ. ಮುಂದಿನ ಅಡಿಕೆ ಫಸಲಿಗೂ ಇದೇ ಸಂಕಷ್ಟದ ಮಳೆ. ಚಳಿಯ ಕೊರತೆ, ಮಳೆಯ ಆಗಮನ ಇದೆರಡೂ ಈಗ ಸಮಸ್ಯೆ, ಕೃಷಿಗೂ ಸಂಕಷ್ಟ.
ಉತ್ತರಾಯಣ ಆರಂಭವಾಗಿರುವ ಕಾರಣ ಹಲವು ಮನೆಗಳಲ್ಲಿ ಶುಭಕಾರ್ಯಗಳು, ಭೂತಾರಾದನೆಯಂತಹ ಕಾರ್ಯಕ್ರಮಗಳು ನಡೆಯುತ್ತಿರುತ್ತದೆ. ಅಕಾಲಿಕ ಮಳೆಗೆ ಕಾರ್ಯಕ್ರಮ ನಡೆಯುವ ಮನೆಗಳಲ್ಲಿ ಚಿಂತೆ ಉಂಟಾಗಿದೆ.
ಗ್ರಾಮೀಣ ಭಾಗಗಳು ಸೇರಿದಂತೆ ಈಗ ಅಭಿವೃದ್ಧಿ ಕಾರ್ಯಗಳು ಆರಂಭವಾಗುವ ಸಮಯ. ಈಗ ಅಕಾಲಿಕ ಮಳೆಯು ಅಭಿವೃದ್ಧಿ ಕಾರ್ಯಗಳೂ ವಿಳಂಬಕ್ಕೂ ಕಾರಣವಾಗುತ್ತಿದೆ.
RM ನ್ಯೂಸ್, ಕೊಕ್ಕಡ -ನೆಲ್ಯಾಡಿ
Belthangady, Kadaba ,Puttur, Sullia, Bantwal area of Dakshina Kannada district received rain for about an hour on Wednesday morning.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…