MIRROR FOCUS

ಮತ್ತೆ ಕೈಕೊಟ್ಟ ಹವಾಮಾನ | ಹಲವು ಕಡೆ ಮಳೆ-ತುಂತುರು ಮಳೆ | ಧನುರ್ಮಾಸದಲ್ಲಿ ವರುಣಾಗಮನ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆಗಾಲದಲ್ಲಿ ನಿರೀಕ್ಷೆಯಷ್ಟು ಮಳೆ ಬರದೇ ಹೋಯಿತು. ಬರದ ಛಾಯೆ ಆವರಿಸಿತು. ಚಳಿಗಾಲ ಬಂದಾಗಲೂ ಚಳಿ ದೂರವಾಯಿತು. ಈ ಬಾರಿ 18 ಡಿಗ್ರಿಗಿಂತ ಕಡಿಮೆ ಚಳಿ ಇಲ್ಲದೇ ಹೋಯಿತು. ಈಗ ಮತ್ತೆ ಮಳೆ ಶುರುವಾಗಿದೆ. ಕೆಲವು ಕಡೆ ಉತ್ತಮ ಮಳೆ, ಇನ್ನೂ ಕೆಲವು ಕಡೆ ತುಂತುರು ಮಳೆ ಕರಾವಳಿ ಪ್ರದೇಶದಲ್ಲಿ ಕಾಣಿಸಿದೆ. ಒಟ್ಟಾರೆ ಈ ಬಾರಿ ಹವಾಮಾನ ಕೈಕೊಟ್ಟಿದೆ. ಕೃಷಿ, ಗ್ರಾಮೀಣ ಭಾಗ ಸಂಕಷ್ಟಕ್ಕೆ ಸಿಲುಕುತ್ತಿದೆ.

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಕಡಬ ,ಪುತ್ತೂರು, ಸುಳ್ಯ, ಬಂಟ್ವಾಳ ಭಾಗದಲ್ಲಿ ಬುಧವಾರ ಮುಂಜಾನೆ ಸುಮಾರು ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಮಂಗಳವಾರ ಸಂಜೆಯಿಂದಲೇ ತುಂತುರು ಮಳೆಯ ಸಿಂಚನವಾಗುತ್ತಿದ್ದು ಮೋಡ ಕವಿದ ವಾತಾವರಣವಿತ್ತು.ಕಾಸರಗೋಡು ಕಡೆ 2 ಮಿಮೀ ವರೆಗೆ ಮಳೆಯಾದರೆ ಬಂಟ್ವಾಳ ಪ್ರದೇಶದಲ್ಲಿ 5 ಮಿಮೀ ಮಳೆಯಾಗಿದೆ.

ಧನುರ್ಮಾಸದಲ್ಲಿ ವಿಪರೀತ ಚಳಿ ಇರುವುದು ಪದ್ಧತಿ. ಆದರೆ ಈಗ ಅಕಾಲಿಕ ಮಳೆ ಕೃಷಿಕರಿಗೂ ಸಂಕಷ್ಟ.  ಅಡಿಕೆ ಬೆಳೆ ಸಹಿತ ಎಲ್ಲಾ ಕೃಷಿಕರಿಗೂ ಸಂಕಷ್ಟ. ಅಡಿಕೆ ಒಣಗಿಸಲು ಹರಸಾಹಸ, ರಬ್ಬರ್‌ ಇಳುವರಿ ಕುಂಠಿತವಾಗಿದೆ. ಮುಂದಿನ ಅಡಿಕೆ ಫಸಲಿಗೂ ಇದೇ ಸಂಕಷ್ಟದ ಮಳೆ. ಚಳಿಯ ಕೊರತೆ, ಮಳೆಯ ಆಗಮನ ಇದೆರಡೂ ಈಗ ಸಮಸ್ಯೆ, ಕೃಷಿಗೂ ಸಂಕಷ್ಟ.

Advertisement

ಉತ್ತರಾಯಣ ಆರಂಭವಾಗಿರುವ ಕಾರಣ ಹಲವು ಮನೆಗಳಲ್ಲಿ ಶುಭಕಾರ್ಯಗಳು, ಭೂತಾರಾದನೆಯಂತಹ ಕಾರ್ಯಕ್ರಮಗಳು ನಡೆಯುತ್ತಿರುತ್ತದೆ. ಅಕಾಲಿಕ ಮಳೆಗೆ ಕಾರ್ಯಕ್ರಮ ನಡೆಯುವ ಮನೆಗಳಲ್ಲಿ ಚಿಂತೆ ಉಂಟಾಗಿದೆ.

ಗ್ರಾಮೀಣ ಭಾಗಗಳು ಸೇರಿದಂತೆ ಈಗ ಅಭಿವೃದ್ಧಿ ಕಾರ್ಯಗಳು ಆರಂಭವಾಗುವ ಸಮಯ. ಈಗ ಅಕಾಲಿಕ ಮಳೆಯು ಅಭಿವೃದ್ಧಿ ಕಾರ್ಯಗಳೂ ವಿಳಂಬಕ್ಕೂ ಕಾರಣವಾಗುತ್ತಿದೆ.

RM ನ್ಯೂಸ್‌, ಕೊಕ್ಕಡ -ನೆಲ್ಯಾಡಿ

Belthangady, Kadaba ,Puttur, Sullia, Bantwal area of ​​Dakshina Kannada district received rain for about an hour on Wednesday morning.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬುಧನಿಂದ ಈ 4 ರಾಶಿಯವರ ಲಕ್ ಫುಲ್ ಚೇಂಜ್, ಸಕಲ ಐಶ್ವರ್ಯ ಪ್ರಾಪ್ತಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

23 hours ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

1 day ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

1 day ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

1 day ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

1 day ago