Advertisement
MIRROR FOCUS

ಮತ್ತೆ ಕೈಕೊಟ್ಟ ಹವಾಮಾನ | ಹಲವು ಕಡೆ ಮಳೆ-ತುಂತುರು ಮಳೆ | ಧನುರ್ಮಾಸದಲ್ಲಿ ವರುಣಾಗಮನ..! |

Share

ಮಳೆಗಾಲದಲ್ಲಿ ನಿರೀಕ್ಷೆಯಷ್ಟು ಮಳೆ ಬರದೇ ಹೋಯಿತು. ಬರದ ಛಾಯೆ ಆವರಿಸಿತು. ಚಳಿಗಾಲ ಬಂದಾಗಲೂ ಚಳಿ ದೂರವಾಯಿತು. ಈ ಬಾರಿ 18 ಡಿಗ್ರಿಗಿಂತ ಕಡಿಮೆ ಚಳಿ ಇಲ್ಲದೇ ಹೋಯಿತು. ಈಗ ಮತ್ತೆ ಮಳೆ ಶುರುವಾಗಿದೆ. ಕೆಲವು ಕಡೆ ಉತ್ತಮ ಮಳೆ, ಇನ್ನೂ ಕೆಲವು ಕಡೆ ತುಂತುರು ಮಳೆ ಕರಾವಳಿ ಪ್ರದೇಶದಲ್ಲಿ ಕಾಣಿಸಿದೆ. ಒಟ್ಟಾರೆ ಈ ಬಾರಿ ಹವಾಮಾನ ಕೈಕೊಟ್ಟಿದೆ. ಕೃಷಿ, ಗ್ರಾಮೀಣ ಭಾಗ ಸಂಕಷ್ಟಕ್ಕೆ ಸಿಲುಕುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಕಡಬ ,ಪುತ್ತೂರು, ಸುಳ್ಯ, ಬಂಟ್ವಾಳ ಭಾಗದಲ್ಲಿ ಬುಧವಾರ ಮುಂಜಾನೆ ಸುಮಾರು ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಮಂಗಳವಾರ ಸಂಜೆಯಿಂದಲೇ ತುಂತುರು ಮಳೆಯ ಸಿಂಚನವಾಗುತ್ತಿದ್ದು ಮೋಡ ಕವಿದ ವಾತಾವರಣವಿತ್ತು.ಕಾಸರಗೋಡು ಕಡೆ 2 ಮಿಮೀ ವರೆಗೆ ಮಳೆಯಾದರೆ ಬಂಟ್ವಾಳ ಪ್ರದೇಶದಲ್ಲಿ 5 ಮಿಮೀ ಮಳೆಯಾಗಿದೆ.

ಧನುರ್ಮಾಸದಲ್ಲಿ ವಿಪರೀತ ಚಳಿ ಇರುವುದು ಪದ್ಧತಿ. ಆದರೆ ಈಗ ಅಕಾಲಿಕ ಮಳೆ ಕೃಷಿಕರಿಗೂ ಸಂಕಷ್ಟ.  ಅಡಿಕೆ ಬೆಳೆ ಸಹಿತ ಎಲ್ಲಾ ಕೃಷಿಕರಿಗೂ ಸಂಕಷ್ಟ. ಅಡಿಕೆ ಒಣಗಿಸಲು ಹರಸಾಹಸ, ರಬ್ಬರ್‌ ಇಳುವರಿ ಕುಂಠಿತವಾಗಿದೆ. ಮುಂದಿನ ಅಡಿಕೆ ಫಸಲಿಗೂ ಇದೇ ಸಂಕಷ್ಟದ ಮಳೆ. ಚಳಿಯ ಕೊರತೆ, ಮಳೆಯ ಆಗಮನ ಇದೆರಡೂ ಈಗ ಸಮಸ್ಯೆ, ಕೃಷಿಗೂ ಸಂಕಷ್ಟ.

ಉತ್ತರಾಯಣ ಆರಂಭವಾಗಿರುವ ಕಾರಣ ಹಲವು ಮನೆಗಳಲ್ಲಿ ಶುಭಕಾರ್ಯಗಳು, ಭೂತಾರಾದನೆಯಂತಹ ಕಾರ್ಯಕ್ರಮಗಳು ನಡೆಯುತ್ತಿರುತ್ತದೆ. ಅಕಾಲಿಕ ಮಳೆಗೆ ಕಾರ್ಯಕ್ರಮ ನಡೆಯುವ ಮನೆಗಳಲ್ಲಿ ಚಿಂತೆ ಉಂಟಾಗಿದೆ.

ಗ್ರಾಮೀಣ ಭಾಗಗಳು ಸೇರಿದಂತೆ ಈಗ ಅಭಿವೃದ್ಧಿ ಕಾರ್ಯಗಳು ಆರಂಭವಾಗುವ ಸಮಯ. ಈಗ ಅಕಾಲಿಕ ಮಳೆಯು ಅಭಿವೃದ್ಧಿ ಕಾರ್ಯಗಳೂ ವಿಳಂಬಕ್ಕೂ ಕಾರಣವಾಗುತ್ತಿದೆ.

RM ನ್ಯೂಸ್‌, ಕೊಕ್ಕಡ -ನೆಲ್ಯಾಡಿ

Belthangady, Kadaba ,Puttur, Sullia, Bantwal area of ​​Dakshina Kannada district received rain for about an hour on Wednesday morning.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

3 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago