Advertisement
MIRROR FOCUS

ಮತ್ತೆ ಕೈಕೊಟ್ಟ ಹವಾಮಾನ | ಹಲವು ಕಡೆ ಮಳೆ-ತುಂತುರು ಮಳೆ | ಧನುರ್ಮಾಸದಲ್ಲಿ ವರುಣಾಗಮನ..! |

Share

ಮಳೆಗಾಲದಲ್ಲಿ ನಿರೀಕ್ಷೆಯಷ್ಟು ಮಳೆ ಬರದೇ ಹೋಯಿತು. ಬರದ ಛಾಯೆ ಆವರಿಸಿತು. ಚಳಿಗಾಲ ಬಂದಾಗಲೂ ಚಳಿ ದೂರವಾಯಿತು. ಈ ಬಾರಿ 18 ಡಿಗ್ರಿಗಿಂತ ಕಡಿಮೆ ಚಳಿ ಇಲ್ಲದೇ ಹೋಯಿತು. ಈಗ ಮತ್ತೆ ಮಳೆ ಶುರುವಾಗಿದೆ. ಕೆಲವು ಕಡೆ ಉತ್ತಮ ಮಳೆ, ಇನ್ನೂ ಕೆಲವು ಕಡೆ ತುಂತುರು ಮಳೆ ಕರಾವಳಿ ಪ್ರದೇಶದಲ್ಲಿ ಕಾಣಿಸಿದೆ. ಒಟ್ಟಾರೆ ಈ ಬಾರಿ ಹವಾಮಾನ ಕೈಕೊಟ್ಟಿದೆ. ಕೃಷಿ, ಗ್ರಾಮೀಣ ಭಾಗ ಸಂಕಷ್ಟಕ್ಕೆ ಸಿಲುಕುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಕಡಬ ,ಪುತ್ತೂರು, ಸುಳ್ಯ, ಬಂಟ್ವಾಳ ಭಾಗದಲ್ಲಿ ಬುಧವಾರ ಮುಂಜಾನೆ ಸುಮಾರು ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಮಂಗಳವಾರ ಸಂಜೆಯಿಂದಲೇ ತುಂತುರು ಮಳೆಯ ಸಿಂಚನವಾಗುತ್ತಿದ್ದು ಮೋಡ ಕವಿದ ವಾತಾವರಣವಿತ್ತು.ಕಾಸರಗೋಡು ಕಡೆ 2 ಮಿಮೀ ವರೆಗೆ ಮಳೆಯಾದರೆ ಬಂಟ್ವಾಳ ಪ್ರದೇಶದಲ್ಲಿ 5 ಮಿಮೀ ಮಳೆಯಾಗಿದೆ.

ಧನುರ್ಮಾಸದಲ್ಲಿ ವಿಪರೀತ ಚಳಿ ಇರುವುದು ಪದ್ಧತಿ. ಆದರೆ ಈಗ ಅಕಾಲಿಕ ಮಳೆ ಕೃಷಿಕರಿಗೂ ಸಂಕಷ್ಟ.  ಅಡಿಕೆ ಬೆಳೆ ಸಹಿತ ಎಲ್ಲಾ ಕೃಷಿಕರಿಗೂ ಸಂಕಷ್ಟ. ಅಡಿಕೆ ಒಣಗಿಸಲು ಹರಸಾಹಸ, ರಬ್ಬರ್‌ ಇಳುವರಿ ಕುಂಠಿತವಾಗಿದೆ. ಮುಂದಿನ ಅಡಿಕೆ ಫಸಲಿಗೂ ಇದೇ ಸಂಕಷ್ಟದ ಮಳೆ. ಚಳಿಯ ಕೊರತೆ, ಮಳೆಯ ಆಗಮನ ಇದೆರಡೂ ಈಗ ಸಮಸ್ಯೆ, ಕೃಷಿಗೂ ಸಂಕಷ್ಟ.

ಉತ್ತರಾಯಣ ಆರಂಭವಾಗಿರುವ ಕಾರಣ ಹಲವು ಮನೆಗಳಲ್ಲಿ ಶುಭಕಾರ್ಯಗಳು, ಭೂತಾರಾದನೆಯಂತಹ ಕಾರ್ಯಕ್ರಮಗಳು ನಡೆಯುತ್ತಿರುತ್ತದೆ. ಅಕಾಲಿಕ ಮಳೆಗೆ ಕಾರ್ಯಕ್ರಮ ನಡೆಯುವ ಮನೆಗಳಲ್ಲಿ ಚಿಂತೆ ಉಂಟಾಗಿದೆ.

ಗ್ರಾಮೀಣ ಭಾಗಗಳು ಸೇರಿದಂತೆ ಈಗ ಅಭಿವೃದ್ಧಿ ಕಾರ್ಯಗಳು ಆರಂಭವಾಗುವ ಸಮಯ. ಈಗ ಅಕಾಲಿಕ ಮಳೆಯು ಅಭಿವೃದ್ಧಿ ಕಾರ್ಯಗಳೂ ವಿಳಂಬಕ್ಕೂ ಕಾರಣವಾಗುತ್ತಿದೆ.

RM ನ್ಯೂಸ್‌, ಕೊಕ್ಕಡ -ನೆಲ್ಯಾಡಿ

Belthangady, Kadaba ,Puttur, Sullia, Bantwal area of ​​Dakshina Kannada district received rain for about an hour on Wednesday morning.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

7 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

14 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago