Advertisement
MIRROR FOCUS

ಮತ್ತೆ ಕೈಕೊಟ್ಟ ಹವಾಮಾನ | ಹಲವು ಕಡೆ ಮಳೆ-ತುಂತುರು ಮಳೆ | ಧನುರ್ಮಾಸದಲ್ಲಿ ವರುಣಾಗಮನ..! |

Share

ಮಳೆಗಾಲದಲ್ಲಿ ನಿರೀಕ್ಷೆಯಷ್ಟು ಮಳೆ ಬರದೇ ಹೋಯಿತು. ಬರದ ಛಾಯೆ ಆವರಿಸಿತು. ಚಳಿಗಾಲ ಬಂದಾಗಲೂ ಚಳಿ ದೂರವಾಯಿತು. ಈ ಬಾರಿ 18 ಡಿಗ್ರಿಗಿಂತ ಕಡಿಮೆ ಚಳಿ ಇಲ್ಲದೇ ಹೋಯಿತು. ಈಗ ಮತ್ತೆ ಮಳೆ ಶುರುವಾಗಿದೆ. ಕೆಲವು ಕಡೆ ಉತ್ತಮ ಮಳೆ, ಇನ್ನೂ ಕೆಲವು ಕಡೆ ತುಂತುರು ಮಳೆ ಕರಾವಳಿ ಪ್ರದೇಶದಲ್ಲಿ ಕಾಣಿಸಿದೆ. ಒಟ್ಟಾರೆ ಈ ಬಾರಿ ಹವಾಮಾನ ಕೈಕೊಟ್ಟಿದೆ. ಕೃಷಿ, ಗ್ರಾಮೀಣ ಭಾಗ ಸಂಕಷ್ಟಕ್ಕೆ ಸಿಲುಕುತ್ತಿದೆ.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಕಡಬ ,ಪುತ್ತೂರು, ಸುಳ್ಯ, ಬಂಟ್ವಾಳ ಭಾಗದಲ್ಲಿ ಬುಧವಾರ ಮುಂಜಾನೆ ಸುಮಾರು ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಮಂಗಳವಾರ ಸಂಜೆಯಿಂದಲೇ ತುಂತುರು ಮಳೆಯ ಸಿಂಚನವಾಗುತ್ತಿದ್ದು ಮೋಡ ಕವಿದ ವಾತಾವರಣವಿತ್ತು.ಕಾಸರಗೋಡು ಕಡೆ 2 ಮಿಮೀ ವರೆಗೆ ಮಳೆಯಾದರೆ ಬಂಟ್ವಾಳ ಪ್ರದೇಶದಲ್ಲಿ 5 ಮಿಮೀ ಮಳೆಯಾಗಿದೆ.

Advertisement

ಧನುರ್ಮಾಸದಲ್ಲಿ ವಿಪರೀತ ಚಳಿ ಇರುವುದು ಪದ್ಧತಿ. ಆದರೆ ಈಗ ಅಕಾಲಿಕ ಮಳೆ ಕೃಷಿಕರಿಗೂ ಸಂಕಷ್ಟ.  ಅಡಿಕೆ ಬೆಳೆ ಸಹಿತ ಎಲ್ಲಾ ಕೃಷಿಕರಿಗೂ ಸಂಕಷ್ಟ. ಅಡಿಕೆ ಒಣಗಿಸಲು ಹರಸಾಹಸ, ರಬ್ಬರ್‌ ಇಳುವರಿ ಕುಂಠಿತವಾಗಿದೆ. ಮುಂದಿನ ಅಡಿಕೆ ಫಸಲಿಗೂ ಇದೇ ಸಂಕಷ್ಟದ ಮಳೆ. ಚಳಿಯ ಕೊರತೆ, ಮಳೆಯ ಆಗಮನ ಇದೆರಡೂ ಈಗ ಸಮಸ್ಯೆ, ಕೃಷಿಗೂ ಸಂಕಷ್ಟ.

ಉತ್ತರಾಯಣ ಆರಂಭವಾಗಿರುವ ಕಾರಣ ಹಲವು ಮನೆಗಳಲ್ಲಿ ಶುಭಕಾರ್ಯಗಳು, ಭೂತಾರಾದನೆಯಂತಹ ಕಾರ್ಯಕ್ರಮಗಳು ನಡೆಯುತ್ತಿರುತ್ತದೆ. ಅಕಾಲಿಕ ಮಳೆಗೆ ಕಾರ್ಯಕ್ರಮ ನಡೆಯುವ ಮನೆಗಳಲ್ಲಿ ಚಿಂತೆ ಉಂಟಾಗಿದೆ.

Advertisement

ಗ್ರಾಮೀಣ ಭಾಗಗಳು ಸೇರಿದಂತೆ ಈಗ ಅಭಿವೃದ್ಧಿ ಕಾರ್ಯಗಳು ಆರಂಭವಾಗುವ ಸಮಯ. ಈಗ ಅಕಾಲಿಕ ಮಳೆಯು ಅಭಿವೃದ್ಧಿ ಕಾರ್ಯಗಳೂ ವಿಳಂಬಕ್ಕೂ ಕಾರಣವಾಗುತ್ತಿದೆ.

RM ನ್ಯೂಸ್‌, ಕೊಕ್ಕಡ -ನೆಲ್ಯಾಡಿ

Advertisement

Belthangady, Kadaba ,Puttur, Sullia, Bantwal area of ​​Dakshina Kannada district received rain for about an hour on Wednesday morning.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

11 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

11 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

12 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

12 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

12 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

12 hours ago