ಹವಾಮಾನ ವರದಿ | 16.10.2024 | ರಾಜ್ಯದಲ್ಲಿ ಹಿಂಗಾರು ಮಳೆ ಆರಂಭ | ವಿವಿದೆಡೆ ಮಳೆ ಸಾಧ್ಯತೆ |

October 16, 2024
12:11 PM

17.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಅ. 17ರಿಂದ ಸಂಜೆ ಹಾಗೂ ರಾತ್ರಿಯ ಸಮಯದಲ್ಲಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಸಹಿತ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ.

ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ಅ. 17ರಿಂದ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗದಗ, ದಾವಣಗೆರೆ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ( ನಿನ್ನೆಯ ಮಹಾಮಳೆಯ ಮುನ್ಸೂಚನೆ ಇಲ್ಲವಾಗಿದೆ.) , ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಅ. 17ರಿಂದ ಸಂಜೆ ಹಾಗೂ ರಾತ್ರಿಯ ವೇಳೆ ಗುಡುಗು ಸಹಿತ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.

Advertisement

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿರುವ ವಾಯುಭಾರ ಕುಸಿತವು ಅ. 17ರಂದು  ದುರ್ಬಲಗೊಳ್ಳುವ ಲಕ್ಷಣಗಳಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಹಿಂಗಾರು ಮಳೆ ಆರಂಭವಾಗಲಿದೆ. ಸುಮಾರು ಅ.24 ನಂತರ ಹಿಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿದ್ದು, ಮುಂದಿನ ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಆಂದ್ರಾ, ತಮಿಳುನಾಡು ಕರಾವಳಿ ಕಡೆ ಸಾಗಿದರೆ ಮಾತ್ರ ಚುರುಕಾಗಬಹುದು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group