ಕೇರಳ, ಮಾಹೆ, ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ ಏಳು ದಿನಗಳಲ್ಲಿ ಗುಡುಗು, ಗಾಳಿ ಮತ್ತು ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ದಿನಗಳ ಕಾಲ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ ಗುರುವಾರದಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ ಕೂಡಾ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.
ಇದೇ ವೇಳೆ ಮುಂದಿನ ಎರಡು ದಿನಗಳಲ್ಲಿ ಉತ್ತರ ಮಧ್ಯಪ್ರದೇಶ, ಪಂಜಾಬ್, ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಶಾಖದ ಅಲೆಯ ಪರಿಸ್ಥಿತಿ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಸ್ಥಾನದಲ್ಲಿ ಶುಕ್ರವಾರದವರೆಗೆ ತೀವ್ರ ಶಾಖದ ಅಲೆಯ ಪರಿಸ್ಥಿತಿ ಇರುತ್ತದೆ, ದೆಹಲಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, 43.8 ಡಿಗ್ರಿ ತಾಪಮಾನ ದಾಖಲಾಗಿದೆ. ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಕೇರಳ ಮಾಹೆ, ಕರ್ನಾಟಕ ಮತ್ತು ಲಕ್ಷ ದ್ವೀಪದಲ್ಲಿ ಮುಂದಿನ ಏಳು ದಿನಗಳಲ್ಲಿ ಗುಡುಗು, ಬಿರುಗಾಳಿ ಮತ್ತು ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ನಾಳೆಯಿಂದ ಶನಿವಾರದವರೆಗೆ ಪಶ್ಚಿಮ ಭಾರತದಲ್ಲಿ ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕೊಂಕಣ ಮತ್ತು ಗೋವಾದಲ್ಲಿ ಇದೇ ರೀತಿಯ ಪರಿಸ್ಥಿತಿ ಇರುತ್ತದೆ. ಮುಂದಿನ ನಾಲ್ಕೈದು ದಿನಗಳವರೆಗೆ ಉತ್ತರಾಖಂಡ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…