Advertisement
MIRROR FOCUS

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

Share

ಕೇರಳ, ಮಾಹೆ, ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ ಏಳು ದಿನಗಳಲ್ಲಿ ಗುಡುಗು, ಗಾಳಿ ಮತ್ತು ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ದಿನಗಳ ಕಾಲ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ  ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಕೊಡಗು  ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ  ಗುರುವಾರದಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ ಕೂಡಾ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ಇದೇ ವೇಳೆ  ಮುಂದಿನ ಎರಡು ದಿನಗಳಲ್ಲಿ ಉತ್ತರ ಮಧ್ಯಪ್ರದೇಶ, ಪಂಜಾಬ್, ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶಗಳಲ್ಲಿ  ಶಾಖದ ಅಲೆಯ ಪರಿಸ್ಥಿತಿ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಸ್ಥಾನದಲ್ಲಿ ಶುಕ್ರವಾರದವರೆಗೆ ತೀವ್ರ ಶಾಖದ ಅಲೆಯ ಪರಿಸ್ಥಿತಿ ಇರುತ್ತದೆ, ದೆಹಲಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, 43.8 ಡಿಗ್ರಿ ತಾಪಮಾನ ದಾಖಲಾಗಿದೆ.  ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಕೇರಳ ಮಾಹೆ, ಕರ್ನಾಟಕ ಮತ್ತು ಲಕ್ಷ ದ್ವೀಪದಲ್ಲಿ ಮುಂದಿನ ಏಳು ದಿನಗಳಲ್ಲಿ ಗುಡುಗು, ಬಿರುಗಾಳಿ ಮತ್ತು ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ನಾಳೆಯಿಂದ ಶನಿವಾರದವರೆಗೆ ಪಶ್ಚಿಮ ಭಾರತದಲ್ಲಿ ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕೊಂಕಣ ಮತ್ತು ಗೋವಾದಲ್ಲಿ ಇದೇ ರೀತಿಯ ಪರಿಸ್ಥಿತಿ ಇರುತ್ತದೆ. ಮುಂದಿನ ನಾಲ್ಕೈದು ದಿನಗಳವರೆಗೆ ಉತ್ತರಾಖಂಡ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

36 minutes ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

8 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

8 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

9 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

11 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

23 hours ago