Advertisement
MIRROR FOCUS

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

Share

ಕೇರಳ, ಮಾಹೆ, ಕರ್ನಾಟಕ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ ಏಳು ದಿನಗಳಲ್ಲಿ ಗುಡುಗು, ಗಾಳಿ ಮತ್ತು ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ದಿನಗಳ ಕಾಲ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ  ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಕೊಡಗು  ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ  ಗುರುವಾರದಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟರಾಜಾ ತಿಳಿಸಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲೆಯಲ್ಲಿ ಕೂಡಾ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.

ಇದೇ ವೇಳೆ  ಮುಂದಿನ ಎರಡು ದಿನಗಳಲ್ಲಿ ಉತ್ತರ ಮಧ್ಯಪ್ರದೇಶ, ಪಂಜಾಬ್, ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶಗಳಲ್ಲಿ  ಶಾಖದ ಅಲೆಯ ಪರಿಸ್ಥಿತಿ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಸ್ಥಾನದಲ್ಲಿ ಶುಕ್ರವಾರದವರೆಗೆ ತೀವ್ರ ಶಾಖದ ಅಲೆಯ ಪರಿಸ್ಥಿತಿ ಇರುತ್ತದೆ, ದೆಹಲಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, 43.8 ಡಿಗ್ರಿ ತಾಪಮಾನ ದಾಖಲಾಗಿದೆ.  ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಕೇರಳ ಮಾಹೆ, ಕರ್ನಾಟಕ ಮತ್ತು ಲಕ್ಷ ದ್ವೀಪದಲ್ಲಿ ಮುಂದಿನ ಏಳು ದಿನಗಳಲ್ಲಿ ಗುಡುಗು, ಬಿರುಗಾಳಿ ಮತ್ತು ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ನಾಳೆಯಿಂದ ಶನಿವಾರದವರೆಗೆ ಪಶ್ಚಿಮ ಭಾರತದಲ್ಲಿ ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕೊಂಕಣ ಮತ್ತು ಗೋವಾದಲ್ಲಿ ಇದೇ ರೀತಿಯ ಪರಿಸ್ಥಿತಿ ಇರುತ್ತದೆ. ಮುಂದಿನ ನಾಲ್ಕೈದು ದಿನಗಳವರೆಗೆ ಉತ್ತರಾಖಂಡ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

16 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

23 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

23 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago