ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯ ಮುನ್ಸೂಚನೆ | ಹವಾಮಾನ ಇಲಾಖೆ ನೀಡಿದ ಮಾಹಿತಿ |

October 24, 2024
7:51 PM
ಬಂಗಾಳಕೊಲ್ಲಿಯಲ್ಲಿನ ಡಾನಾ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ

ಬಂಗಾಳಕೊಲ್ಲಿಯಲ್ಲಿನ ಡಾನಾ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ. ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.  ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.  ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.  ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
Advertisement
Advertisement
Advertisement

ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭಗೊಂಡಿದ್ದು, ಸಾಮಾನ್ಯ ಜನಜೀವನ   ಬಾಧಿತಗೊಂಡಿದೆ.  ಮಳೆಯಿಂದಾಗಿ ಮಾಯಕೊಂಡ, ಆನಗೋಡು, ಬಾಡ, ತ್ಯಾವಣಿಗೆ ಬಸವಾಪಟ್ಟಣ ಹೋಬಳಿಗಳಲ್ಲಿ ಕೊಯಿಲಿಗೆ ಬಂದಿದ್ದ ಭತ್ತ ಮೆಕ್ಕೆಜೋಳ ಮತ್ತು ತರಕಾರಿ ಬೆಳೆಗಳಿಗೆ ಹಾನಿಯಾಗಿದೆ.  ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ನಷ್ಟದ ಅಂದಾಜು ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾದ್ಯಂತ ವಾಡಿಕೆಗಿಂತ ಅಧಿಕ ಪ್ರಮಾಣದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಮೂವತ್ತಕ್ಕೂ ಅಧಿಕ ಕೆರೆಗಳು ಸಂಪೂರ್ಣ ಭರ್ತಿಯಾಗಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ನಿರ್ಮಾಣದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ
October 25, 2024
3:38 PM
by: The Rural Mirror ಸುದ್ದಿಜಾಲ
ಶೇ.61 ರಷ್ಟು ಹಿಂಗಾರು ಮಳೆ ಹೆಚ್ಚು |  7 ಜಿಲ್ಲೆಗಳಲ್ಲಿ ಬೆಳೆ , ಆಸ್ತಿಪಾಸ್ತಿ ಹಾನಿ | ಸಮೀಕ್ಷಗೆ ಸೂಚನೆ |
October 25, 2024
2:33 PM
by: The Rural Mirror ಸುದ್ದಿಜಾಲ
ಉಡುಪಿಯಲ್ಲಿ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿದ ಯೋಗ ಗುರು ರಾಮದೇವ್ |
October 25, 2024
2:18 PM
by: The Rural Mirror ಸುದ್ದಿಜಾಲ
ಸ್ಥಳೀಯವಾಗಿ ಮೀನು ಸೇವನೆ ಪ್ರೋತ್ಸಾಹಿಸಲು  “ಮತ್ಸ್ಯವಾಹಿನಿ” ಯೋಜನೆ
October 25, 2024
2:06 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror