ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯ ಮುನ್ಸೂಚನೆ | ಹವಾಮಾನ ಇಲಾಖೆ ನೀಡಿದ ಮಾಹಿತಿ |

October 24, 2024
7:51 PM
ಬಂಗಾಳಕೊಲ್ಲಿಯಲ್ಲಿನ ಡಾನಾ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ

ಬಂಗಾಳಕೊಲ್ಲಿಯಲ್ಲಿನ ಡಾನಾ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ. ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.  ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.  ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.  ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭಗೊಂಡಿದ್ದು, ಸಾಮಾನ್ಯ ಜನಜೀವನ   ಬಾಧಿತಗೊಂಡಿದೆ.  ಮಳೆಯಿಂದಾಗಿ ಮಾಯಕೊಂಡ, ಆನಗೋಡು, ಬಾಡ, ತ್ಯಾವಣಿಗೆ ಬಸವಾಪಟ್ಟಣ ಹೋಬಳಿಗಳಲ್ಲಿ ಕೊಯಿಲಿಗೆ ಬಂದಿದ್ದ ಭತ್ತ ಮೆಕ್ಕೆಜೋಳ ಮತ್ತು ತರಕಾರಿ ಬೆಳೆಗಳಿಗೆ ಹಾನಿಯಾಗಿದೆ.  ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ನಷ್ಟದ ಅಂದಾಜು ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾದ್ಯಂತ ವಾಡಿಕೆಗಿಂತ ಅಧಿಕ ಪ್ರಮಾಣದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಮೂವತ್ತಕ್ಕೂ ಅಧಿಕ ಕೆರೆಗಳು ಸಂಪೂರ್ಣ ಭರ್ತಿಯಾಗಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror