ಬಂಗಾಳಕೊಲ್ಲಿಯಲ್ಲಿನ ಡಾನಾ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಧಾರಕಾರ ಮಳೆ ಸುರಿಯುತ್ತಿದೆ. ಮಂಡ್ಯ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭಗೊಂಡಿದ್ದು, ಸಾಮಾನ್ಯ ಜನಜೀವನ ಬಾಧಿತಗೊಂಡಿದೆ. ಮಳೆಯಿಂದಾಗಿ ಮಾಯಕೊಂಡ, ಆನಗೋಡು, ಬಾಡ, ತ್ಯಾವಣಿಗೆ ಬಸವಾಪಟ್ಟಣ ಹೋಬಳಿಗಳಲ್ಲಿ ಕೊಯಿಲಿಗೆ ಬಂದಿದ್ದ ಭತ್ತ ಮೆಕ್ಕೆಜೋಳ ಮತ್ತು ತರಕಾರಿ ಬೆಳೆಗಳಿಗೆ ಹಾನಿಯಾಗಿದೆ. ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ನಷ್ಟದ ಅಂದಾಜು ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾದ್ಯಂತ ವಾಡಿಕೆಗಿಂತ ಅಧಿಕ ಪ್ರಮಾಣದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಮೂವತ್ತಕ್ಕೂ ಅಧಿಕ ಕೆರೆಗಳು ಸಂಪೂರ್ಣ ಭರ್ತಿಯಾಗಿವೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…