ವೆದರ್ ಮಿರರ್

ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

25.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಗಲಿನ ವೇಳೆಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಸಂಜೆ ಹಾಗೂ ರಾತ್ರಿ ಘಟ್ಟದ ಕೆಳಗಿನ ಪ್ರದೇಶಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಪೂರ್ವದಿಂದ ಒತ್ತಡ ಹೆಚ್ಚಿದ್ದರೆ ಕರಾವಳಿ ತೀರದವರೆಗೂ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ತರ ಒಳನಾಡು ಭಾಗಗಳ ಮಳೆ ಹಾಗೂ ಗಾಳಿಯ ಒತ್ತಡಕ್ಕೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ಎಪ್ರಿಲ್ 27 ರಿಂದ ಮಳೆ ಹಾಗೂ ವ್ಯಾಪ್ತಿ ಸ್ವಲ್ಪ ಹೆಚ್ಚಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. (ಕಳೆದ ಕೆಲವು ದಿನಗಳಿಂದ ನಿರೀಕ್ಷೆ ಮಟ್ಟದ ಮಳೆಯಾಗುತ್ತಿಲ್ಲ). ಹಾಸನ ಜಿಲ್ಲೆಯ ಸಕಲೇಶಪುರ ಸುತ್ತಮುತ್ತ, ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಶೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ, ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಗುಡುಗಿನೊಂದಿಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 26ರಿಂದ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರ್ಗಿ ಸಹ ಅಲ್ಲಲ್ಲಿ ಮಳೆಯಗಬಹುದು.
ದಕ್ಷಿಣ ಒಳನಾಡಿನ ಚಿತ್ರದುರ್ಗ, ಮೈಸೂರು ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡದ ವಾತಾವರಣ ಇರಬಹುದು. ಈಗಿನಂತೆ ಎಪ್ರಿಲ್ 26 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 19-06-2025 | ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಂತಹ ತಿರುವಿಕೆಯು ಮಧ್ಯಪ್ರದೇಶದ ಉತ್ತರ ಭಾಗ ತಲುಪಿದ್ದು,…

50 minutes ago

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?

ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…

3 hours ago

ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ

ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…

7 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…

8 hours ago

ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…

8 hours ago