ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

June 27, 2025
2:16 PM
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು, ಮಳೆ ಪೂರ್ತಿ ಬಿಟ್ಟು ಸಿಗುವ ಸಾಧ್ಯತೆಗಳಿಲ್ಲ. ಜುಲೈ 1ರಿಂದ ಸ್ವಲ್ಪ ಹೆಚ್ಚಾಗಬಹುದು. ಜುಲೈ 6 ರಿಂದ ಮತ್ತೆ ಕಡಿಮೆಯಾಗುವ ಲಕ್ಷಣಗಳಿವೆ.

28.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಆದರೆ ಮಧ್ಯ ಬಿಡುವಿನ ಅಂತರ ಸ್ವಲ್ಪ ಜಾಸ್ತಿ ಇರಬಹುದು. ಮಳೆಯೊಂದಿಗೆ ಗಾಳಿಯ ವೇಗವೂ ಸ್ವಲ್ಪ ಜಾಸ್ತಿ ಇರಬಹುದು. ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು, ಮಳೆ ಪೂರ್ತಿ ಬಿಟ್ಟು ಸಿಗುವ ಸಾಧ್ಯತೆಗಳಿಲ್ಲ. ಜುಲೈ 1ರಿಂದ ಸ್ವಲ್ಪ ಹೆಚ್ಚಾಗಬಹುದು. ಜುಲೈ 6 ರಿಂದ ಮತ್ತೆ ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಬಿಡುವಿನ ಸಮಯ ಸ್ವಲ್ಪ ಹೆಚ್ಚಿರಬಹುದು. ಕೆಲವು ಭಾಗಗಳಲ್ಲಿ ಸ್ವಲ್ಪ ಬಿಸಿಲಿನ ಸಾಧ್ಯತೆಯೂ ಇದೆ. ಈಗಿನಂತೆ ಜೂನ್ 29 ರಿಂದ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿಯಲ್ಲಿ ಮಳೆಯ ಹೆಚ್ಚಿದಂತೆಯೇ ಮಲೆನಾಡು ಭಾಗಗಳಲ್ಲಿಯೂ ಹೆಚ್ಚಾಗುವ ಸಾಧ್ಯತೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.  ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಈಗಿನಂತೆ ಜೂನ್ 28 ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಜುಲೈ 4ರಿಂದ ಅಲ್ಲಲ್ಲಿ ಮತ್ತೆ ಮಳೆ ಆರಂಭವಾಗುವ ಸೂಚನೆಗಳಿವೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror